ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ಉತ್ತಾರಖಂಡ ಸಿಎಂ ರಾಜೀನಾಮೆ

Public TV
2 Min Read

ಡೆಹರಾಡೂನ್: ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ತೀರ್ಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

ರಾವತ್ ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ರಾವತ್, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ. ಕೊರೊನಾದಿಂದಾಗಿ ಬೈ ಎಲೆಕ್ಷನ್ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದಾರೆ.

ಈಗಾಗಲೇ ರಾವತ್ ಕಳೆದ ಮೂರು ದಿನಗಳಿಂದ ಕೇಂದ್ರ ಬಿಜೆಪಿಯ ನಾಯಕರೊಂದಿಗೆ ಚರ್ಚಿಸಿ ಬಳಿಕ ಈ ನಿರ್ಧಾರ ಮಾಡಿದ್ದಾರೆ. ಈಗಾಗಲೇ ರಾಜೀನಾಮೆ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ನೀಡಿದ್ದಾರೆ. ಇದಾದ ಬಳಿಕ ಉತ್ತಾರಖಂಡದ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ : ಶಾರ್ಟ್ಸ್ ಧರಿಸಿ ಅಂಗಾಂಗ ಪ್ರದರ್ಶನಕ್ಕೆ ಕಾಲೇಜಿಗೆ ಬರೋದಾ? ಮತ್ತೆ ಮಹಿಳೆಯರ ಉಡುಪು ಪ್ರಶ್ನಿಸಿದ ಸಿಎಂ ರಾವತ್

ತೀರ್ಥ್ ಸಿಂಗ್ ರಾವತ್ ಸಂಸತ್ ಸದಸ್ಯರಾಗಿ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಸಿಎಂ ಆದ 6 ತಿಂಗಳ ಒಳಗೆ ರಾಜ್ಯ ವಿಧಾನಸಭೆ ಸದಸ್ಯರಾಗಬೇಕಾಗಿತ್ತು. ಆದರೆ ಇದೀಗ ಚುನಾವಣೆ ನಡೆಸಲು ಸಾಧ್ಯವಾಗದೆ ಇರುವ ಹಿನ್ನೆಲೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಉತ್ತರಾಖಂಡದ ಮುಖ್ಯಮಂತ್ರಿ ತೀವೇಂದ್ರ ಸಿಂಗ್ ರಾವತ್ ಕೂಡ ಇದೇ ರೀತಿಯ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡಿದ್ದರು ಬಳಿಕ ತೀರ್ಥ್ ಸಿಂಗ್ ರಾವತ್ ಸಿಎಂ ಆಗಿದ್ದರು. ಅದಾದ ಬಳಿಕ ಉತ್ತರಾಖಂಡದಲ್ಲಿ ಉಂಟಾದ ನಾಯಕತ್ವ ಬಿಕ್ಕಟ್ಟಿನಿಂದಾಗಿ ರಾವತ್ ಮೇಲೆ ಕೇಂದ್ರದಿಂದಲೂ ಅಲ್ಪ ಮಟ್ಟಿನ ಹಿನ್ನಡೆ ಉಂಟಾಗಿತ್ತು. ಅದಲ್ಲದೆ ಮಹಿಳೆಯರು ಧರಿಸುವ ರಿಪ್ಪಡ್ ಜೀನ್ಸ್ ಪ್ಯಾಂಟ್ ಬಗ್ಗೆ ರಾವತ್ ಹೇಳಿದ ಹೇಳಿಕೆಯಿಂದ ವ್ಯಾಪಕ ವಿರೋಧ ಕೂಡ ಉಂಟಾಗಿತ್ತು. ಇದನ್ನೂ ಓದಿ : ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ರೆ ಕೊರೊನಾ ಬರಲ್ಲ: ತೀರ್ಥ್ ಸಿಂಗ್ ರಾವತ್

ಇದೀಗ ಮತ್ತೆ ಉತ್ತರಾಖಂಡದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಬೇಕಾಗಿದ್ದು, ಶಾಸಕರಾದ ಸತ್ಪಲ್ ಮಹಾರಾಜ್ ಮತ್ತು ದಾನ್ ಸಿಂಗ್ ರಾವತ್ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಇಂದು ಮಧ್ಯಾಹ್ನ ಬಿಜೆಪಿ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದರ ಬಗ್ಗೆ ಚರ್ಚೆಗಳು ನಡೆದಿವೆ. ಉತ್ತರಾಖಂಡ ಬಿಜೆಪಿಯ ಮಾಜಿ ಅಧ್ಯಕ್ಷ ಬಿಶನ್ ಸಿಂಗ್ ಚುಪ್ಲಾ ಮತ್ತು ಮಾಜಿ ಸಿಎಂ ತ್ರೀವೇಂದ್ರ ಸಿಂಗ್ ಹೆಸರಗಳು ಮುಖ್ಯಮಂತ್ರಿ ರೇಸ್ ನಲ್ಲಿವೆ.

Share This Article
Leave a Comment

Leave a Reply

Your email address will not be published. Required fields are marked *