ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ 17 ಸಂಸದರಿಗೆ ಕೊರೊನಾ

Public TV
1 Min Read

ನವದೆಹಲಿ: ಮೊದಲ ದಿನದ ಸಂಸತ್ ಅಧಿವೇಶನದ ವೇಳೆ 17 ಜನ ಸಂಸದರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿವೆ.

ದೇಶದಲ್ಲಿ ಕೊರೊನಾ ಸಂಕಷ್ಟವಿದ್ದರೂ ಹಲವಾರು ಮನ್ನೆಚ್ಚೆರಿಕೆ ಕ್ರಮಗಳನ್ನು ತೆಗೆದುಕೊಂಡು ಇಂದು ಸಂಸತ್ ಅಧಿವೇಶನವನ್ನು ಆರಂಭ ಮಾಡಲಾಗಿತ್ತು. ಆದರೆ ಇದರಲ್ಲಿ ಭಾಗವಹಿಸಿದ್ದ ಬಿಜೆಪಿಯ ಮೀನಾಕ್ಷಿ ಲೇಖಿ, ಅನಂತ್ ಕುಮಾರ್ ಹೆಗ್ಡೆ ಮತ್ತು ಪರ್ವೇಶ್ ಸಾಹಿಬ್ ಸಿಂಗ್ ಸೇರಿದಂತೆ 17 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಅಧಿವೇಶನಕ್ಕೂ ಮುನ್ನ ಮಾತನಾಡಿದ್ದ ಪ್ರಧಾನಿ ಮೋದಿಯವರು, ಈ ಬಾರಿ ವಿಭಿನ್ನ ಪರಿಸ್ಥಿತಿಯಲ್ಲಿ ಅಧಿವೇಶನ ಆರಂಭಗೊಳ್ಳಲಿದೆ. ಕೊರೊನಾ ಜೊತೆಗೆ ಕರ್ತವ್ಯ ನಿರ್ವಹಿಬೇಕಾದ ಸ್ಥಿತಿಯಲ್ಲಿ ನಾವಿದ್ದೇವೆ. ಗಡಿಯಲ್ಲಿ ಚೀನಾ ವಿರುದ್ಧ ಹೋರಾಡುತ್ತಿರುವ ಸೈನಿಕರಿಗಾಗಿ ಎಲ್ಲ ಸಂಸದರು ಒಗ್ಗಟ್ಟು ಪ್ರದರ್ಶಿಸಬೇಕಿದೆ. ನಮ್ಮ ಸಂಸದರು ಇಂತಹ ಕಠಿಣ ಪರಿಸ್ಥಿತಿಯಲ್ಲೂ ಕರ್ತವ್ಯವನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಬಜೆಟ್ ಅಧಿವೇಶನವನ್ನ ಸಮಯಕ್ಕಿಂಂತ ಮುಂಚಿತವಾಗಿ ನಿಲ್ಲಿಸಬೇಕಾಯ್ತು ಎಂದಿದ್ದರು.

ಮಾಹಾಮಾರಿ ಕೊರೊನಾಗೆ ಲಸಿಕೆ ಸಿಗೋವರೆಗೂ ನಿರ್ಲಕ್ಷ್ಯ ಬೇಡ. ನಮ್ಮ ವಿಜ್ಞಾನಿಗಳು ಲಸಿಕೆ ಕಂಡುಹಿಡಿಯುವಲ್ಲಿ ಆದಷ್ಟು ಬೇಗ ಸಫಲರಾಗಬೇಕಿದೆ. ವಿಶ್ವದ ಯಾವುದೇ ಮೂಲೆಯಿಂದ ಔಷಧಿ ಸಿದ್ಧವಾದ್ರೆ ಅದುವೇ ಸಂತೋಷದ ವಿಚಾರ. ಹಾಗೆ ಪತ್ರಕರ್ತರು ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಕೊರೊನಾ ವೈರಸ್ ಹಿನ್ನೆಲೆ ಸದನಗಳಲ್ಲಿ ಹಲವು ನಿಯಮಗಳನ್ನ ರೂಪಿಸಲಾಗಿದ್ದು, ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದರು.

ಕೊರೊನಾ, ಆರ್ಥಿಕತೆ ಕುಸಿತ ಸೇರಿದಂತೆ ದೇಶದ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚಿಸಲು ಮುಂಗಾರು ಸಂಸತ್ ಅಧಿವೇಶನ ಆರಂಭಿಸುವಂತೆ ವಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಒತ್ತಾಯ ಮೇರೆಗೆ ಕೊರೊನಾ ಸಂಕಷ್ಟದ ನಡುವೆ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಎಚ್ಚರಿಕೆಯ ನಡುವೆ ಇಂದಿನಿಂದ ಸಂಸತ್ ಕಲಾಪ ಆರಂಭವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *