‘ಅಮಿತ್ ಶಾ ಹಠಾವೋ, ದೇಶ್ ಬಚಾವೋ’ – ಬೆಳಗಾವಿಯಲ್ಲಿ ರೈತರು ಪ್ರತಿಭಟನೆಗೆ ಸಜ್ಜು

Public TV
1 Min Read

ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಇಂದು ಕೆಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಇಂದು ನೂತನ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ಬೆಳಗಾವಿ ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯಿದೆಯನ್ನು ರದ್ದುಗೊಳಿಸುವಂತೆ ಇಂದು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತ ಸಂಘಟನೆಗಳು ಅಮಿತ್ ಶಾ ರನ್ನು ತಡೆದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿ ಸಂಘಟನೆಗಳು ಪಾಲ್ಗೊಳ್ಳಲಿದ್ದು, ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆ ವೇಳೆ ‘ಅಮಿತ್ ಶಾ ಹಠಾವೋ… ದೇಶ ಬಚಾವೋ’ ಎನ್ನುವುದರ ಮೂಲಕ ರೈತ ವಿರೋಧಿ ಕಾನೂನುಗಳು ವಾಪಸ್ ಆಗಲೇಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಲಿದ್ದಾರೆ. ಜೊತೆಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧವೂ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಿದ್ದಾರೆ.

ಶನಿವಾರ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಸಂಜೆ ವಿಧಾನಸೌಧದದಲ್ಲಿ ಗೃಹ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸರ್ಕಾರ ಕರ್ನಾಟಕದಲ್ಲಿ ಆಗುತ್ತಿರುವ ಅಭಿವೃದ್ಧಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ವಿಚಾರವಾಗಿ ಕೊಂಡಾಡಿದರು.

Share This Article
Leave a Comment

Leave a Reply

Your email address will not be published. Required fields are marked *