ಅಯೋಧ್ಯೆಯಲ್ಲಿ ರಾಮಮಂದಿರ ಅಡಿಪಾಯ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ

Public TV
1 Min Read

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮನಗರಿಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

ರಾಮಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದರು. ದೇವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಮಾಡಿದರು. ಕೆಲಕಾಲ ಗುಡಿ ಮುಂದೆ ಕುಳಿತು ಜಪಗೈದರು. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿದರು. ಇದನ್ನೂ ಓದಿ: ರಾಮಮಂದಿರ ನಿಧಿ ಸಂಗ್ರಹ – ಪೇಜಾವರ ಶ್ರೀಗಳ ನೇತೃತ್ವದಲ್ಲಿ ಭಾರೀ ದೇಣಿಗೆ ಸಂಗ್ರಹ

ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ, ಈವರೆಗೆ ನಡೆದ ಕಾಮಗಾರಿಯ ಪ್ರಗತಿಯನ್ನು ಎಂಜಿನಿಯರ್ ಗಳು ಸ್ವಾಮೀಜಿಗೆ ವಿವರಿಸಿದರು. ತಳಹದಿ ಕಾಮಗಾರಿ, ಅದರ ಸಾಮರ್ಥ್ಯದ ಬಗ್ಗೆ ವಿವರಣೆ ನೀಡಿದರು. ಇದನ್ನೂ ಓದಿ: ರಾಮಮಂದಿರಕ್ಕಾಗಿ 28 ವರ್ಷಗಳಿಂದ ಉಪವಾಸ ಮಾಡ್ತೀರೋ 82ರ ವೃದ್ಧೆ

ಈ ವೇಳೆ ಟ್ರಸ್ಟ್ ನ ವಿಶ್ವಸ್ಥ ಡಾ. ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್‍ಆಯಂಡ್‍ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಎಂಜಿನಿಯರ್‍ ಗಳಿಂದಲೂ ಮಾಹಿತಿ ಪಡೆದರು. ಪೇಜಾವರ ಮಠದ ಆಪ್ತ ಕಾರ್ಯದರ್ಶಿ ವಿಷ್ಣು ಮತ್ತು ಕೃಷ್ಣ ಜೊತೆಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *