ಆಕ್ಸಿಜನ್ ಸಿಲಿಂಡರ್ ಕದ್ದು ಪರಾರಿಯಾದರು!

Public TV
1 Min Read

ಭೋಪಾಲ್: ಕೋವಿಡ್ ಸೋಂಕಿತರಿಗೆ ನೀಡಲಾಗುವ ಆಕ್ಸಿಜನ್ ಸಿಲಿಂಡರ್‍ಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಮಧ್ಯ ಪ್ರದೇಶದ ಆಸ್ಪತ್ರೆಗೆ ತರಲಾಗಿದ್ದ ಆಕ್ಸಿಜನ್ ಸಿಲಿಂಡರ್‍ಗಳನ್ನು ದುಷ್ಕರ್ಮಿಗಳು ಕದ್ದಿರುವ ಘಟನೆ ದಾಮೋದ್ ಜಿಲ್ಲೆಯಲ್ಲಿ ನಡೆದಿದೆ.

ಸರ್ಕಾರಿ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್‍ಗಳನ್ನು ತರಲಾಗುತ್ತಿತ್ತು. ಆಮ್ಲಜನಕ ಸಿಲಿಂಡರ್‍ಗಳು ಇದ್ದ ವಾಹನವು ಜಿಲ್ಲಾಸ್ಪತ್ರೆಗೆ ಬರುತ್ತಿದ್ದಂತೆ ಟ್ರಕ್ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಸಿಲಿಂಡರ್‍ಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು.

ಆಕ್ಸಿಜನ್ ಸಿಲಿಂಡರ್‍ಗಳು ಲೂಟಿಯಾಗಿರುವುದು ನಿಜ. ಆದರೆ ಇದರಿಂದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿಲ್ಲ. ಆಸ್ಪತ್ರೆಯಲ್ಲಿ ಸಾಕಷ್ಟು ಆಕ್ಸಿಜನ್ ಮೊದಲೇ ಇತ್ತು. ಹೀಗಾಗಿ ರೋಗಿಗಳು ಆತಂಕಪಡುವ ಅಗತ್ಯತೆ ಇಲ್ಲ. ನಾವು ಪ್ರಕರಣವನ್ನು ದಾಖಲಿಸಿದ್ದೇವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ದಾಮೋ ಜಿಲ್ಲಾ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *