ಆದೇಶ ಪಾಲಿಸದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಗರಂ

Public TV
1 Min Read

ನವದೆಹಲಿ: ಆದೇಶ ಪಾಲನೆ ಮಾಡದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಗರಂ ಆಗಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಿ ಕೆಲಸ ಆರಂಭಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ.

ನಗರದ ಬಾಗಲೂರು ಬಳಿ ಕಸ ವಿಲೇವಾರಿ ಮಾಡುತ್ತಿದ್ದ ಬಿಬಿಎಂಪಿ ವಿರುದ್ಧ ನ್ಯಾಯಾಲಯಕ್ಕೆ ಸ್ಥಳೀಯರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವೇಳೆ ಅಧಿಕಾರಿಗಳ ನಡೆಯನ್ನು ಹಸಿರು ನ್ಯಾಯಾಧಿಕರಣ ಪ್ರಶ್ನಿಸಿ ತರಾಟೆಗೆ ತಗೆದುಕೊಂಡಿದೆ.

ಬಾಗಲೂರಿನಲ್ಲಿ ಬಿಬಿಎಂಪಿ ಡಂಪ್ (ವಿಲೇವಾರಿ) ಮಾಡಿದ್ದ ಎಲ್ಲ ಕಸವನ್ನು ಹೊರ ತೆಗೆದು, ಬೇರೆಡೆ ಸ್ಥಳಾಂತರ ಮಾಡುವಂತೆ ಹಿಂದೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ಸೂಚಿಸಿತ್ತು. ಆದರೆ ಬಿಬಿಎಂಪಿ ಮಾತ್ರ ಇದುವರೆಗೂ ಏನು ಕ್ರಮ ಕೈಗೊಂಡಿಲ್ಲ ಅಂತಾ ಅರ್ಜಿದಾರ ಶ್ರೀನಿವಾಸ ಪರ ವಕೀಲರು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಪರ ವಕೀಲರು ಈಗಾಗಲೇ ಬಾಗಲೂರಿನಲ್ಲಿ ಕಸ ವಿಲೇವಾರಿ ನಿಲ್ಲಿಸಲಾಗಿದೆ. ಐದು ತಿಂಗಳಿನಿಂದ ಕಸ ತೆಗೆಯುವ ಕೆಲಸ ಮಾಡಲಾಗುತ್ತಿದ್ದು, ಶೀಘ್ರವೇ ಬಯೋ ಮೈನಿಂಗ್ ಮುಗಿಸುತ್ತೇವೆ ಅಂತಾ ವಾದ ಮಂಡಿಸಿದರು.

ಬಿಬಿಎಂಪಿ ಪರ ವಕೀಲರು ಮಂಡಿಸಿದ ವಾದವನ್ನು ನ್ಯಾ.ಆದರ್ಶ ಕುಮಾರ್ ಗೊಯಲ್ ನೇತೃತ್ವದ ಪೀಠವು ಪರಿಗಣಿಸಲಿಲ್ಲ. ‘ನೀವು ಪದೇ ಪದೇ ಇದನ್ನೇ ಹೇಳುತ್ತಿರುವಿರಿ. ನಿಮಗೆ ಕೆಲಸ ಮಾಡಿ ಅಂತಾ ಎಷ್ಟು ಸಲ ಹೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿತು.

ಕಸದ ರಾಶಿಯಿಂದ ಮಿಥೇನ್ ಉತ್ಪತ್ತಿಯಾಗಿ ಬೆಂಕಿ ತಗಲುವ ಸಾಧ್ಯತೆ ಇದೆ. ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣ ಬಯೋ ಮೈನಿಂಗ್ ಆಗಬೇಕು ಎಂದು ಬಿಬಿಎಂಪಿಗೆ ಆದೇಶಿಸಿದ ನ್ಯಾ.ಆದರ್ಶ ಕುಮಾರ್ ಗೊಯಲ್ ನೇತೃತ್ವದ ಪೀಠವು ಅಕ್ಟೋಬರ್ 8ಕ್ಕೆ ವಿಚಾರಣೆ ಮುಂದೂಡಿತು.

Share This Article
Leave a Comment

Leave a Reply

Your email address will not be published. Required fields are marked *