ಆಪರೇಷನ್ ಕಮಲ ಆಡಿಯೋ ಕೇಸ್‍ಗೆ ರೋಚಕ ತಿರುವು – ಬಿಎಸ್‍ವೈಗೆ ಸಂಕಷ್ಟ

Public TV
1 Min Read

– ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಅರ್ಜಿ ವಜಾ

ಯಾದಗಿರಿ: ರಾಯಚೂರು ಜಿಲ್ಲೆಯ ದೇವದುರ್ಗ ಐಬಿಯಲ್ಲಿ ನಡೆದಿದ್ದ ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಇದೀಗ ರೋಚಕ ತಿರುವು ಸಿಕ್ಕಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೆ ಆಡಿಯೋ ಕೇಸ್ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಅರ್ಜಿ ವಜಾ ಆಗಿದೆ.

ಜನಪ್ರತಿನಿಧಿಗಳ ವ್ಯಾಜ್ಯ ನ್ಯಾಯಾಲಯ ಜೆಡಿಎಸ್ ಯುವಕ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಗುರುಮಿಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಕಂದಕೂರ ಅವರ ಅರ್ಜಿಯನ್ನು ಎತ್ತಿ ಹಿಡಿದಿದ್ದು, ಸಿಎಂ ಅರ್ಜಿ ವಜಾ ಆಗಿದೆ. ಆಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಕಲಬುರಗಿ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರು ಈ ಪ್ರಕರಣವನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವ್ಯಾಜ್ಯ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ವಜಾ ಮಾಡಿ, ಮರು ತನಿಖೆ ನಡೆಸಲು ಆದೇಶ ನೀಡಿದೆ. ಇದರಿಂದಾಗಿ ಸಿಎಂ ಬಿಎಸೈಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *