ಆರೋಗ್ಯ ಇಲಾಖೆ ಸಿಬ್ಬಂದಿಯ ಎಡವಟ್ಟಿನಿಂದ ಗ್ರಾಮಸ್ಥರಲ್ಲಿ ಆತಂಕ

Public TV
1 Min Read

ಹಾವೇರಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅರ್ಭಟ ಮುಂದುವರಿದಿದೆ. ಅದರೆ ಕೊವೀಡ್ ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಕೊರೊನಾದಿಂದ ಸತ್ತಿಲ್ಲ ಎಂದು ಶವ ಹತ್ತಾಂತರ ಮಾಡಿ ಆರೋಗ್ಯ ಇಲಾಖೆಯ ಎಡವಟ್ಟಿನಿಂದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಜನರಲ್ಲಿ ಈಗ ಆತಂಕ ಶುರುವಾಗುತ್ತಿದೆ.

ಮೇ 10 ರಂದು ಗ್ರಾಮದ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಆತ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ ಎಂದು ಮೃತದೇಹವನ್ನ ಮನೆಯವರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಹಸ್ತಾಂತರ ಮಾಡಿದ್ದರು. ಅಂತ್ಯಕ್ರಿಯೆ ಮುಗಿದ ಮೂರು ದಿನಗಳ ನಂತರ ಮೃತನ ವರದಿ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಮೃತನ ವರದಿ ಕೊರೊನಾ ಪಾಸಿಟಿವ್ ಅಂದಿದ್ದಕ್ಕೆ ಗ್ರಾಮಸ್ಥರಲ್ಲಿ ಈಗ ಆತಂಕ ಶುರುವಾಗಿದೆ. ಕೊರೊನಾ ಇಲ್ಲವೆಂದು ಮೃತನ ಅಂತ್ಯಕ್ರಿಯೆಯನ್ನ ಮೃತನ ಸಂಬಂಧಿಕರು ಹಾಗೂ ಗ್ರಾಮಸ್ಥರು ನೆರವೇರಿಸಿದ್ದೇವೆ. ನೀವು ಸರಿಯಾದ ವರದಿ ಯಾಕೆ ನೀಡಿಲ್ಲ. ಕೋವಿಡ್ ಅಂತಾ ಹೇಳಿದ್ದರೆ ನಾವು ಕೊರೋನಾ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ಮಾಡುತ್ತಿದ್ದೇವು ಅಂತ ಆರೋಗ್ಯ ಇಲಾಖೆ ಸಿಬ್ಬಂದಿಯನ್ನ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *