ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‍ಗೆ ಕೊರೊನಾ ಸೋಂಕು

Public TV
1 Min Read

ಮುಂಬೈ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಟ್ವೀಟ್ ಮೂಲಕ ತಮ್ಮ ಆರೋಗ್ಯದ ಮಾಹಿತಿಯನ್ನ ಶಕ್ತಿಕಾಂತ್ ದಾಸ್ ನೀಡಿದ್ದಾರೆ.

ಟ್ವೀಟ್: ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ನಾನು ಆರೋಗ್ಯವಾಗಿದ್ದು, ನನ್ನ ಸಂಪರ್ಕದಲ್ಲಿದ್ದವರು ಎಚ್ಚರಿಕೆಯಿಂದಿರಿ. ವೈದ್ಯರ ಸಲಹೆ ಹೋಂ ಐಸೋಲೇಷನ್ ಗೆ ಒಳಗಾಗಿದ್ದು, ಮನೆಯಿಂದಲೇ ಕಾರ್ಯ ನಿರ್ವಹಿಸುತ್ತೇನೆ. ಆರ್‍ಬಿಐ ಕೆಲಸಗಳಲ್ಲಿ ಎಂದಿನಂತೆ ನಡೆಯಲಿದ್ದು, ಡೆಪ್ಯೂಟಿ ಗವರ್ನರ್ ಮತ್ತು ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಸಂಪರ್ಕದಲ್ಲಿರುತ್ತೇನೆ ಎಂದು ಶಕ್ತಿಕಾಂತ್ ದಾಸ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಳೆದ ಏಳು ದಿನಗಳಿಂದ ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಗುಣಮಖ ಪ್ರಮಾಣ ಶೇ.90ಕ್ಕೆ ತಲುಪಿದೆ. ಅಕ್ಟೋಬರ್ 19ರಿಂದ ದೇಶದಲ್ಲಿ 55 ಸಾವಿರಕ್ಕೂ ಅಧಿಕ ಕಡಿಮೆ ಪ್ರಕರಣಗಳು ವರದಿ ಆಗುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *