ಆರ್‌ಸಿಬಿ ಗೆಲುವಿಗಾಗಿ ರಾಯಚೂರಿನ ಅಭಿಮಾನಿಗಳಿಂದ ರುದ್ರಾಭಿಷೇಕ

Public TV
1 Min Read

ರಾಯಚೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಂಡದ ಗೆಲುವಿಗಾಗಿ ರುದ್ರಾಭಿಷೇಕ ಮಾಡಿಸುವ ಮೂಲಕ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರುಗುಂಟಾ ಶ್ರೀ ಅಮರೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ನೆರವೇರಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ ರುದ್ರಾಭಿಷೆಕದ ರಶೀದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇಂಡಿಯನ್ ಪ್ರೀಮಿಯನ್ ಲೀಗ್ 2020ರ ಲೀಗ್ ಹಂತದ ಕೊನೆ ಪಂದ್ಯ ಆಡಲು ಸಜ್ಜಾಗಿರುವ ಆರ್‌ಸಿಬಿ ತಂಡದ ಪರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ತಂಡ ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದ್ದು, ಗೆದ್ದರೆ ಪ್ಲೇ – ಆಫ್ ಸ್ಥಾನ ಖಚಿತವಾಗಲಿದೆ. ಮಹತ್ವದ ಪಂದ್ಯದಲ್ಲಿ ಗೆಲುವಿಗೆ ಆರ್‌ಸಿಬಿ ಅಭಿಮಾನಿಗಳು ರುದ್ರಾಭಿಷೇಕ ಮಾಡಿದ್ದಾರೆ. ಇದನ್ನೂ ಓದಿ: ಐಪಿಎಲ್2020: 2ನೇ ಸ್ಥಾನ ಯಾರಿಗೆ? ಕೊಹ್ಲಿ ಪಡೆಗೆ ಪ್ಲೇ ಆಫ್ ಸ್ಥಾನ ಕನ್ಫರ್ಮ್ ಆಗುತ್ತಾ?

Share This Article
Leave a Comment

Leave a Reply

Your email address will not be published. Required fields are marked *