ಆಸ್ತಿ ವಿಚಾರವಾಗಿ ಅಣ್ಣನನ್ನೇ ಕೊಂದ- ಒಂದು ಎಕರೆ ಜಮೀನಿಗಾಗಿ ಹರಿಯಿತು ನೆತ್ತರು

Public TV
1 Min Read

ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ತಮ್ಮನಿಂದಲೇ ಅಣ್ಣನ ಕೊಲೆಯಾಗಿರುವ ಘಟನೆ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಮ್ಮಿಹಾಳ ನಿವಾಸಿಯಾದ ಮೈಲಾರಿ ತಿರ್ಲಾಪುರ (39) ಮೃತ ದುರ್ದೈವಿ. ಮೈಲಾರಿಯ ಚಿಕ್ಕಪ್ಪನ ಮಗ ರವಿ ತಿರ್ಲಾಪುರ ಎಂಬುವವನೇ ಆಸ್ತಿ ವಿಚಾರವಾಗಿ ಅಣ್ಣನನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೈಲಾರಿಯನ್ನು ನಿನ್ನೆ ರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುತ್ತಿಗೆ, ಬೆನ್ನಿನ ಭಾಗಕ್ಕೆ ಮಾರಣಾಂತಿಕ ಕೊಡಲಿ ಪೆಟ್ಟು ಬಿದ್ದಿರುವ ಹಿನ್ನಲೆಯಲ್ಲಿ ಚಿಕಿತ್ಸೆ ಫಲಿಸದೇ ಮೈಲಾರಿ ಕೊನೆಯುಸಿರೆಳೆದಿದ್ದಾರೆ.

ಕಲಘಟಗಿ ಜಮ್ಮಿಹಾಳದಲ್ಲಿನ ಒಂದು ಎಕರೆ ಜಮೀನು ವಿಚಾರವಾಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆರೋಪಿ ರವಿ ಪರಾರಿಯಾಗಿದ್ದಾನೆ. ಆರೋಪಿ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *