ಆಸ್ಪತ್ರೆಯಲ್ಲಿ ಕೊರೊನಾ ಮಣಿಸಿ ಮಠ ಸೇರಿದ ಪುತ್ತಿಗೆ ಸ್ವಾಮೀಜಿ

Public TV
1 Min Read

ಉಡುಪಿ: ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಮಹಾಮಾರಿ ಕೊರೊನಾವನ್ನು ಮಣಿಸಿದ್ದಾರೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ 12 ದಿನಗಳ ಕಾಲ ಕೋವಿಡ್ 19 ಚಿಕಿತ್ಸೆ ಪಡೆದು ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಕೆಎಂಸಿಯಿಂದ ಡಿಸ್ಚಾರ್ಜ್ ಆಗಿ ನೇರವಾಗಿ ಮೂಲ ಮಠಕ್ಕೆ ತೆರಳಿರುವ ಪುತ್ತಿಗೆ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಮುಂದಿನ ಹದಿನಾಲ್ಕು ದಿನಗಳ ಕಾಲ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ವಿಶ್ರಾಂತಿಯ ಅಗತ್ಯತೆ ಇದೆ. ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು ಭಕ್ತರು ಮಠಕ್ಕೆ ಬರುವುದು ಬೇಡ ಎಂದು ಮಠ ಹೇಳಿದೆ.

ಮನೆಯಲ್ಲೇ ಇದ್ದು ದೇವರಲ್ಲಿ ಪ್ರಾರ್ಥಿಸಿ ಎಂದು ಮಠ ವಿನಂತಿಸಿದೆ. ಆಸ್ಪತ್ರೆಯಲ್ಲಿ ಇದ್ದ ಸಂದರ್ಭದಲ್ಲಿ ಯೋಗಕ್ಷೇಮ ವಿಚಾರಿಸಿದ ಹಾಗೂ ಶ್ರೀಗಳ ಶೀಘ್ರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಎಂದು ಪುತ್ತಿಗೆ ಮಠ ಹೇಳಿದೆ. ಸದ್ಯ ಸುಗುಣೇಂದ್ರ ತೀರ್ಥರು ಏಕಾಂತದಲ್ಲಿದ್ದು, ವಿಶ್ರಾಂತಿ ಮಾಡುತ್ತಿದ್ದಾರೆ. ಪ್ರತಿ ದಿನದ ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸ್ವಾಮೀಜಿ ಆಪ್ತರು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *