ಆಸ್ಪತ್ರೆಯಿಂದ ದಾದಾ ಡಿಸ್ಚಾರ್ಜ್- ವೈದ್ಯರಿಗೆ ಧನ್ಯವಾದ ಅರ್ಪಿಸಿದ ಗಂಗೂಲಿ

Public TV
1 Min Read

ಕೋಲ್ಕತ್ತಾ: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ವುಡ್ ಲ್ಯಾಂಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ದಾದಾ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಆಸ್ಪತ್ರೆಯ ವೈದ್ಯರಿಗೆ ಧನ್ಯವಾದ ತಿಳಿಸಿದರು. ಅಲ್ಲದೆ ಈವಾಗ ನಾನು ಆರಾಮಾಗಿದ್ದೇನೆ ಎಂದು ಹೇಳಿದರು.

ಮನೆಯಲ್ಲಿ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ದಾದ ತಲೆ ತಿರುಗಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೂಡಲೇ ಅವರ ಹೃದಯದ ರಕ್ತನಾಳದಲ್ಲಿರುವ ಬ್ಲಾಕ್‍ಗಳನ್ನು ತೆರವುಗೊಳಿಸಲಾಗಿತ್ತು. ಒಂದು ಸ್ಟೆಂಟ್ ಕೂಡ ಅಳವಡಿಸಲಾಗಿತ್ತು.

ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಗಣ್ಯರು, ಅಭಿಮಾನಿಗಳು ಶೀಘ್ರ ಚೇತರಿಸಿಕೊಂಡು ವಾಪಸ್ ಬರುವಂತೆ ಹಾರೈಸಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಗಂಗೂಲಿ ಪತ್ನಿ ಜೊತೆ ಮಾತಾನಾಡಿದ ಮೋದಿ ಬಳಿ ಗಂಗೂಲಿ ಜೊತೆ ಮಾತಾಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಶೀಘ್ರವೇ ಗುಣಮುಖರಾಗುವಂತೆ ಸೂಚಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *