ಇಂದು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಂಪೂರ್ಣ ಬಂದ್

Public TV
1 Min Read

ದಾವಣಗೆರೆ: ಇಂದು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಂಪೂರ್ಣ ಬಂದ್ ಆಗಲಿದೆ.

ಡಿಸಿ ಕಚೇರಿಯಲ್ಲಿ ಏಳು ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಇಂದು ಜಿಲ್ಲಾಡಳಿತ ಎಲ್ಲ ಕಚೇರಿಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಜಿಲ್ಲಾಡಳಿತ ಸಂಪೂರ್ಣವಾಗಿ ಬಂದ್ ಆಗಲಿದೆ. ಕಚೇರಿಯ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ ಹೇಳಿದ್ದಾರೆ.

ಕಚೇರಿಯ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿಗಳು ಸಹ ಕ್ವಾರಂಟೈನ್ ನಲ್ಲಿದ್ದಾರೆ. ದಾವಣಗೆರೆಯಲ್ಲಿ ಸೋಮವಾರ ಒಂದೇ ದಿನ 225 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3.666ಕ್ಕೆ ಏರಿಕೆಯಾಗಿದೆ. ನಿನ್ನೆ 11 ಜನರನ್ನು ಕೊರೊನಾ ಬಲಿ ಪಡೆದಿದ್ದು, 1,234 ಸಕ್ರಿಯ ಪ್ರಕರಣಗಳಿವೆ.

Share This Article
Leave a Comment

Leave a Reply

Your email address will not be published. Required fields are marked *