ಇಂದು ಸಂಜೆ ಸಿಎಂ ಯಡಿಯೂರಪ್ಪ ಭಾಷಣ

Public TV
0 Min Read

ಬೆಂಗಳೂರು: ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಇಂದು ಸಂಜೆ 4 ಗಂಟೆಗೆ ಫೇಸ್‍ಬುಕ್ ಮತ್ತು ಯುಟ್ಯೂಬ್ ಮೂಲಕ ಲೈವ್ ಬರಲಿದ್ದಾರೆ. ಸಿಎಂ ಸುಮಾರು 15 ನಿಮಿಷ ಕಾಲ ಲೈವ್‍ನಲ್ಲಿ ಭಾಷಣ ಮಾಡಲಿದ್ದಾರೆ. ಲೈವ್ ಬರುವ ಮೂಲಕ ರಾಜ್ಯದ ಜನತೆಗೆ ಕೊರೊನಾ ಕುರಿತು ಮಹತ್ತರ ಸಂದೇಶ ನೀಡಲಿದ್ದಾರೆ.

ಲಾಕ್‍ಡೌನ್ ಮುಗಿಯುತ್ತಿದ್ದಂತೆ ಲೈವ್ ಮೂಲಕ ಜನರಿಗೆ ಏನು ಸಂದೇಶ ಕೊಡಬಹುದು ಎಂಬ ಭಾರೀ ಕುತೂಹಲವನ್ನು ಸಿಎಂ ಯಡಿಯೂರಪ್ಪ ಹುಟ್ಟಿಸಿದ್ದಾರೆ. ಬೆಂಗಳೂರು ಅನ್‍ಲಾಕ್ ಬಗ್ಗೆಯೂ ಲೈವ್‍ನಲ್ಲಿ ಮಾತನಾಡುವ ಸಾಧ್ಯತೆ ಇದೆ.

Share This Article
Leave a Comment

Leave a Reply

Your email address will not be published. Required fields are marked *