ಇಂದು 26,811 ಪಾಸಿಟಿವ್, 530 ಸಾವು – 40,741 ಡಿಸ್ಚಾರ್ಜ್

Public TV
1 Min Read

– ಬೆಂಗಳೂರಿನಲ್ಲಿ 6,433 ಕೇಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಕರ್ನಾಟಕದಲ್ಲಿ ಇಂದು 26,811 ಮಂದಿಗೆ ಸೋಂಕು ತಗುಲಿದ್ದು, 530 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 40,741 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಲ್ಲಿಯವರೆಗೆ ರಾಜ್ಯದಲ್ಲಿ 24,997,84 ಮಂದಿಗೆ ಕೊರೊನಾ ಬಂದಿದ್ದು, ಈ ಪೈಕಿ ಒಟ್ಟು 20,62,910 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,09,924ಕ್ಕೆ ತಲುಪಿದೆ.

ಇಂದು 530 ಜನ ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ ರಾಜ್ಯದಲ್ಲಿ ಒಟ್ಟು 26,929 ಜನ ಸಾವನ್ನಪ್ಪಿದ್ದಾರೆ. ಇಂದು 40,741 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.19.48ರಷ್ಟಿದ್ದು, ಮೃತರ ಪ್ರಮಾಣ ಶೇ.1.97ರಷ್ಟಿದೆ.

ಇಂದು 28,077 ಆಂಟಿಜನ್ ಟೆಸ್ಟ್, 1,09,507  ಆರ್‌ಟಿ-ಪಿಸಿಆರ್ ಸೇರಿದಂತೆ ಒಟ್ಟು 1,37,584 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 1,27,317 ಮಂದಿಗೆ ಲಸಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ 6,433 ಮಂದಿಗೆ ಕೊರೊನಾ ದೃಢಪಟ್ಟಿದ್ದು, 285 ಜನ ಸಾವನ್ನಪ್ಪಿದ್ದಾರೆ. 2,07,357 ಸಕ್ರಿಯ ಪ್ರಕರಣಗಳಿವೆ. ಮೈಸೂರು 2,792, ಹಾಸನ 1,471, ತುಮಕೂರು 1,399, ದಾವಣಗೆರೆ 1,309, ಬೆಳಗಾವಿ 1,205 ಪ್ರಕರಣಗಳು ವರದಿಯಾಗಿವೆ.

Share This Article
Leave a Comment

Leave a Reply

Your email address will not be published. Required fields are marked *