ಇಂದ್ರಜಿತ್ ಜೊತೆಗಿನ ಫೋಟೋ ವೈರಲ್ – ನನ್ನ ಹೆಸರು ತಳುಕು ಹಾಕೋ ಕೆಲಸ ಮಾಡ್ಬೇಡಿ ಅಂದ್ರು ಹೆಚ್‍ಡಿಕೆ

Public TV
1 Min Read

– ನನ್ನಂತೆ ಮುಕ್ತವಾಗಿ ವಿಷಯ ಪ್ರಸ್ತಾಪಿಸೋರು ಈ ದೇಶದಲ್ಲಿಲ್ಲ

ಬೆಂಗಳೂರು: ಈ ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕುವ ಕೆಲಸ ಮಾಡಬೇಡಿ. ಅನೇಕ ಬಾರಿ ಇಂದ್ರಜಿತ್ ಲಂಕೇಶ್ ನನ್ನನ್ನು ಭೇಟಿಯಾಗಿ ಇಂಟರ್ ವ್ಯೂ ತೆಗೆದುಕೊಂಡಿದ್ದಾರೆ. ಆದರೆ ಇತ್ತೀಚೆಗೆ ನಾನು ಅವರನ್ನು ಭೇಟಿ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ-ಇಂದ್ರಜಿತ್ ಲಂಕೇಶ್ ಫೋಟೋ ವೈರಲ್ ವಿಚಾರದ ಸಂಬಂಧ ಪ್ರತಿಕ್ರಿಯಿಸಿ, ಇತ್ತೀಚಿಗೆ ನಾನು ಇಂದ್ರಜಿತ್ ಲಂಕೇಶ್ ಭೇಟಿಯಾಗಿಲ್ಲ. ಯಾಕೆ ಈ ಪ್ರಕರಣದಲ್ಲಿ ನನ್ನ ಹೆಸರು ತರಲು ಪ್ರಯತ್ನ ಮಾಡ್ತಿದ್ದಾರೋ ಗೊತ್ತಿಲ್ಲ. ನನಗೆ ಮಾಡಲು ಬೇಕಾದಷ್ಟು ಕೆಲಸ ಇವೆ ಎಂದು ಗರಂ ಆದರು.

ನಾನು ರಾಜಕೀಯ ಮಾಡಿದ್ರೆ ನೇರವಾಗಿ ಮಾಡ್ತೀನಿ. ಕದ್ದು ಮುಚ್ಚಿ ರಾಜಕಾರಣ ನಾನು ಮಾಡಲ್ಲ. ನನ್ನಂತೆ ವಿಷಯವನ್ನ ಮುಕ್ತವಾಗಿ ಪ್ರಸ್ತಾಪ ಮಾಡೋರು ಈ ದೇಶದಲ್ಲಿ ಇಲ್ಲ. ಮುಕ್ತಾವಾಗಿ ಎಲ್ಲರ ಜೊತೆ ಚರ್ಚೆ ಮಾಡ್ತೀನಿ. ಈ ಫೋಟೋ ಬಿಡುಗಡೆ ಮಾಡಿರೋ ಹಿಂದಿನ ಉದ್ದೇಶ ಏನು ಅಂತ ನನಗೆ ಗೊತ್ತಿಲ್ಲ. ಈ ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕುವ ಕೆಲಸ ಮಾಡಬೇಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ದರ್ಶನ್ ಬಹಳ ಮುಗ್ಧ, ಯಾವುದೇ ಕೆಟ್ಟ ಕೆಲಸ ಮಾಡಲ್ಲ: ಬಿ.ಸಿ ಪಾಟೀಲ್

ಪ್ರತಿ ನಿತ್ಯ ನೂರಾರು ಜನ ನನ್ನನ್ನ ಭೇಟಿ ಆಗ್ತಾರೆ. ಯುವಕರು, ವಯಸ್ಸಾಗಿರೋರು ಫೊಟೋ ತೆಗೆದುಕೊಳ್ತಾರೆ. ಇತ್ತೀಚೆಗೆ ನಾನು ಇಂದ್ರಜಿತ್ ಭೇಟಿಯಾಗಿಲ್ಲ. ಈ ಫೋಟೋ ಈಗ ಯಾರು ಉಪಯೋಗ ಮಾಡಿಕೊಳ್ಳಲು ಹೋಗ್ತಿದ್ದಾರೆ ಅನ್ನೋ ಸತ್ಯ ಇಂದ್ರಜಿತ್ ಲಂಕೇಶ್ ತಿಳಿಸಲಿ ಎಂದು ಮಾಜಿ ಸಿಎಂ ಹೇಳಿದ್ದಾರೆ.  ಇದನ್ನೂ ಓದಿ: ‘ಏನಯ್ಯಾ ದರ್ಶನ್‍ಗೆ ತಲೆ ಇಲ್ವೇನಯ್ಯಾ, ಹೋಗಿ ಹೋಗಿ ನಾಯಿಗೆ ಕಚ್ಚಿದ್ದಾನೆ’

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಗಂಭೀರ ಆರೋಪ ಮಾಡಿದ ಸುದ್ದಿಯಾಗುತ್ತಿದ್ದಂತೆಯೇ ಇತ್ತ ಹೆಚ್‍ಡಿಕೆ, ಇಂದ್ರಜಿತ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಸಣ್ಣ ಗಲಾಟೆ ನಡೆದಿದ್ದು ನಿಜ, ಆದ್ರೆ ದರ್ಶನ್ ಹೊಡೆದಿಲ್ಲ: ಸಂದೇಶ್ ನಾಗರಾಜ್ ಪುತ್ರ

Share This Article
Leave a Comment

Leave a Reply

Your email address will not be published. Required fields are marked *