ಈಜಲು ಹೋಗಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

Public TV
1 Min Read

ರಾಯಚೂರು: ಕೂಲಿ ಕೆಲಸಕ್ಕೆ ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗುಡಗಲದಿನ್ನಿ ಗ್ರಾಮದ ಬಳಿ ನಡದಿದೆ.

ಮಸ್ಕಿ ತಾಲೂಕಿನ ಬೋಗಾಪುರ ಗ್ರಾಮದ ಕೇಶವ (15) ಸಾವನ್ನಪ್ಪಿರುವ ಬಾಲಕ. ಕೂಲಿ ಕೆಲಸ ಮಾಡಲು ಹೋದಾಗ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಈ ವೇಳೆ ಕೆರೆಯಲ್ಲಿ ಕೆಸರಿದ್ದ ಕಾರಣ ಈಜಲು ಆಗದೇ ಬಾಲಕ ಸಾವನ್ನಪ್ಪಿದ್ದಾನೆ.

ಶಾಲೆ ಇಲ್ಲದ ಹಿನ್ನೆಲೆ ಬಾಲಕ ಕೃಷಿ ಕೂಲಿ ಕೆಲಸಕ್ಕೆ ತೆರಳಿದ್ದ. ಎರಡು ದಿನಗಳಿಂದ ಶವಕ್ಕಾಗಿ ಹುಡುಕಾಟ ನಡೆದಿತ್ತು. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ನಿರಂತರವಾಗಿ ಹುಡುಕಾಟ ನಡೆಸಿ ಶವ ಪತ್ತೆ ಹಚ್ಚಿದ್ದಾರೆ.

ತುರವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *