ಉಡುಪಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಣ – ಠಾಣೆಗೆ ಹಿಂದೂ ಸಂಘಟನೆಗಳ ಮುತ್ತಿಗೆ

Public TV
1 Min Read

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಯ ಸದಸ್ಯರು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟಿಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ. ಘಟನೆ ನಡೆದು ಮೂರು ದಿನ ಕಳೆದರೂ ಬಾಲಕಿ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ.

ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಜಮಾಯಿಸಿದ್ದರು. ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಣ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಎಂದು ಸಂಘಟನೆಯ ಪ್ರಮುಖರು ಆಪಾದಿಸಿದ್ದಾರೆ. ಈ ಘಟನೆಗೆ ಯಾರೆಲ್ಲಾ ಕುಮ್ಮಕ್ಕು ನೀಡಿದ್ದಾರೆ ಎಲ್ಲರನ್ನೂ ತಕ್ಷಣಕ್ಕೆ ಬಂಧಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ಮನವಿಯನ್ನು ಸಲ್ಲಿಸಲಾಯ್ತು.

ಮನವಿ ಸ್ವೀಕರಿಸಿ ಉಪ ಪೊಲೀಸ್ ಅಧೀಕ್ಷಕ ಜೈಶಂಕರ್ ಮಾತನಾಡಿ, ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಸಿಸಿಟಿವಿ ಫುಟೇಜ್ ಲಭ್ಯವಾಗಿದ್ದು ಆರೋಪಿಯ ಚಲನವಲನಗಳ ಬಗ್ಗೆ ನಿಗಾ ಇರಿಸಲಾಗಿದೆ. ತನಿಖೆಯ ಬಗ್ಗೆ ಈಗಾಲೇ ಏನು ಹೇಳಲಿಕ್ಕೆ ಆಗುವುದಿಲ್ಲ. ಇದರಿಂದ ಆರೋಪಗಳಿಗೆ ಅನುಕೂಲವಾಗಬಹುದು ಆರೋಪಿಯನ್ನು ತಕ್ಷಣ ಬಂಧಿಸುವ ವಿಶ್ವಾಸ ನಮಗಿದೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಆರೋಪಿ ಬಂಧನ ಶೀಘ್ರ ಆಗದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ಕೊಟ್ಟರು. ಬಜರಂಗದಳ ಪ್ರಾಂತ ಸಂಚಾಲಕರು ಸುನಿಲ್ ಕೆ.ಆರ್. ಇದು ಲವ್ ಜಿಹಾದ್ ಷಡ್ಯಂತ್ರ ಇದರ ಹಿಂದೆ ಮತಾಂಧ ಸಂಘಟನೆಗಳ ಪಾತ್ರ ಇದೆ. ಯುವಕನ ಜೊತೆ ಕೈಜೋಡಿಸಿರುವ ವ್ಯಕ್ತಿಗಳನ್ನು ಮೊದಲು ಬಂಧಿಸಿ ವಿಚಾರಣೆ ನಡೆಸಿದ್ದರೆ ಬಾಲಕಿಯನ್ನು ಪತ್ತೆಹಚ್ಚಲು ಸುಲಭವಾಗುತ್ತದೆ. ಇನ್ನೆರಡು ದಿನದಲ್ಲಿ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *