ಉಡುಪಿಯಲ್ಲಿ 700 ಮನೆ ಮುಳುಗಡೆ – 3500ಕ್ಕೂ ಹೆಚ್ಚು ಜನರ ರಕ್ಷಣೆ

Public TV
1 Min Read

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, 24 ಗಂಟೆಯಲ್ಲಿ 2500 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದೆ, ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ ಉಡುಪಿ ಡಿಸಿ ಜಿ ಜಗದೀಶ್ ಮನವಿ ಮಾಡಿದ್ದಾರೆ.

ರಾತ್ರಿ ವೇಳೆ ಮನೆ ಮುಳುಗಡೆಯಾದರೆ ರಕ್ಷಣಾಕಾರ್ಯ ಕಷ್ಟವಾಗುತ್ತದೆ. ಜಿಲ್ಲಾಡಳಿತದ ಜೊತೆ ಜನ ಕೈಜೋಡಿಸಿ, ಶೀಘ್ರ ಸುರಕ್ಷಿತ ಪ್ರದೇಶಕ್ಕೆ ಬನ್ನಿ ಎಂದು ಹೇಳಿದ್ದಾರೆ. ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಿದೆ. ಜಿಲ್ಲೆಯಲ್ಲಿ ಸುಮಾರು 2,500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು ಜನಪ್ರತಿನಿಧಿಗಳು ಸೇರಿ ಸಾವಿರಾರು ಜನರ ರಕ್ಷಣೆ ಮಾಡಿದ್ದಾರೆ. ತಗ್ಗು ಪ್ರದೇಶದಲ್ಲಿದ್ದ ಜನ ಸುರಕ್ಷಿತ ತಾಣಗಳಿಗೆ ಬನ್ನಿ ರಕ್ಷಣಾ ಕಾರ್ಯದಲ್ಲಿ ಸಾರ್ವಜನಿಕರು ಅತೀ ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಕ್ಕೆ ಧನ್ಯವಾದ ಎಂದರು.

Share This Article
Leave a Comment

Leave a Reply

Your email address will not be published. Required fields are marked *