ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Public TV
1 Min Read

ನವದೆಹಲಿ: ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಯಾಗಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ.

2017ರ ನ್ಯಾಯಾಂಗ ನಿಂದನೆ ಆದೇಶ ಮರು ಪರಿಶೀಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾ ಮಾಡಿದೆ. ನ್ಯಾ. ಅಶೋಕ್ ಭೂಷಣ್ ನೇತೃತ್ವದ ತ್ರಿ ಸದಸ್ಯ ಪೀಠ ಈ ಅರ್ಜಿ ವಜಾ ಮಾಡಿದೆ.

ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಉದ್ಯಮಿ ವಿಜಯ್ ಮಲ್ಯ 40 ಮಿಲಿಯನ್ ಡಾಲರ್ ಹಣವನ್ನು ತನ್ನ ಮೂವರು ಮಕ್ಕಳಿಗೆ ವರ್ಗಾಯಿಸಿದ್ದರು. ಇದನ್ನು ಪ್ರಶ್ನಿಸಿ ಎಸ್‍ಬಿಐ ಒಕ್ಕೂಟದ ಬ್ಯಾಂಕುಗಳು ಸುಪ್ರೀಂಕೋರ್ಟ್ ನಲ್ಲಿ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದವು. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಆದೇಶದ ಬಳಿಕ ಹಣ ವರ್ಗಾವಣೆ ಮಾಡಿದ ಹಿನ್ನೆಲೆ ವಿಜಯ್ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿತ್ತು.

ಈ ಆದೇಶವನ್ನು ಪರಿಶೀಲಿಸುವಂತೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಕಳೆದ ವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ಅರ್ಜಾಗೊಳಿಸಿ ಆದೇಶ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *