ಎಚ್ಚರಿಕೆ ಇದ್ರೂ ನೇತ್ರಾವತಿ ನದಿಗೆ ಹಾರಿ ಯುವಕರಿಂದ ಮೋಜು ಮಸ್ತಿ

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಬಂಟ್ವಾಳದ ಪಾಣೆ ಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದರು. ಶನಿವಾರ ನೇತ್ರಾವತಿ ನದಿಯಲ್ಲಿ ನೀರಿನ ರಭಸ ಜಾಸ್ತಿಯಾಗಿತ್ತು. ಇಂದು ನದಿ ನೀರಿನ ರಭಸ ಹಾಗೂ ಮಳೆಯೂ ಕಡಿಮೆಯಾಗಿದೆ. ಹೀಗಾಗಿ ಪಾಣೆಮಂಗಳೂರಿನ ಹಳೆಯ ಸೇತುವೆಯಲ್ಲಿ ಯುವಕರು ನದಿಗೆ ಹಾರಿ ಈಜಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಇಂದು ಕೂಡ ರೆಡ್ ಅಲರ್ಟ್ ಇದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ. ಆದರೂ ಯುವಕರು ಈ ರೀತಿ ಅಪಾಯಕಾರಿ ಸಾಹಸ ನಡೆಸಿ ನದಿಗೆ ಹಾರಿ ಈಜಾಡುತ್ತಿದ್ದಾರೆ. ಅನಾಹುತ ಆಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *