ಎಣ್ಣೆ ಕಿರಿಕ್ ಬಗ್ಗೆ ನಟ ಹರ್ಷ ಪ್ರತಿಕ್ರಿಯೆ

Public TV
1 Min Read

ಬೆಂಗಳೂರು: ಸೋಮವಾರ ತಡರಾತ್ರಿ ಕುಡಿದ ಮತ್ತಿನಲ್ಲಿ ನಗರದ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ನಟ ಹರ್ಷ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಅವರು, ಮನೆಯಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದೆವು. ಊಟ ಆದ್ಮೇಲೆ ಅವರನ್ನ ಕಳಿಸಿ ಕೊಡಲು ಅಪಾಟ್ರ್ಮೆಂಟ್ ನಿಂದ ಹೊರಗೆ ಬಂದಿದ್ದೆ.ಈ ವೇಳೆ ಬೀಟ್ ಪೊಲೀಸರು ಬಂದ್ರು. ನೀವು ಡ್ರಗ್ಸ್ ತೆಗೆದುಕೊಂಡಿದ್ದೀರಿ ಅಂತ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು ಎಂದರು.

ಠಾಣೆಯಲ್ಲಿ, ನಾವು ಮನೆಯಲ್ಲಿ ಡ್ರಿಂಕ್ಸ್ ಮಾಡಿದ್ವಿ. ಆದರೆ ನಮಗೂ ಡ್ರಗ್ಸ್‍ಗೂ ಸಂಬಂಧ ಇಲ್ಲ ಅಂತ ಹೇಳಿದ್ವಿ. ಹೀಗಾಗಿ ವಿಚಾರಣೆ ಮಾಡಿ ಮನೆಗೆ ಕಳಿಸಿದ್ರು. ಸದ್ಯ ನಾನು ಮನೆಯಲ್ಲಿ ಇದ್ದೀನಿ. ಯಾರು ಗಾಬರಿ ಆಗ್ಬೇಡಿ ಎಂದು ತಿಳಿಸಿದರು.

ಏನಿದು ಪ್ರಕರಣ?:
ರಾತ್ರಿ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್‍ಮೆಂಟ್ ಮುಂಭಾಗ ಗೆಳೆಯರೊಂದಿಗೆ ನಟ ಹರ್ಷ ಕುಡಿಯುತ್ತಿದ್ದರು. ಅಪಾರ್ಟ್‍ಮೆಂಟ್ ಮುಂದೆ ಕುಡಿಯುತ್ತಿರುವ ವಿಚಾರ ತಿಳಿದು ರಾತ್ರಿ ಬೀಟ್‍ನಲ್ಲಿದ್ದ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಕುಡಿದು ಇಲ್ಲಿ ಯಾಕೆ ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಹರ್ಷ ಮತ್ತು ಗೆಳೆಯರು ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದರು ಎಂದು ಹೇಳಲಾಗಿತ್ತು.

“ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ, ನಮಗೆ ದೊಡ್ಡ ವ್ಯಕ್ತಿಗಳ ಪರಿಚಯವಿದೆ. ನೀವು ಏನು ಬೇಕಾದರೂ ಮಾಡಿಕೊಳ್ಳಿ” ಎಂದು ಅವಾಜ್ ಹಾಕಿದ್ದಾರೆ. ಕಿರಿಕ್ ಮಾಡಿದ ಕೂಡಲೇ ಪೊಲೀಸರು ಸ್ನೇಹಿತರ ಜೊತೆ ಹರ್ಷರನ್ನು ವಶಕ್ಕೆ ಪಡೆದು ಕಾರಿನಲ್ಲಿ ಕುಳ್ಳಿರಿಸಿ ಠಾಣೆಗೆ ಕರೆ ತಂದು ಬಿಸಿ ಮುಟ್ಟಿಸಿದ್ದರು ಎಂದು ವರದಿಯಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *