ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ: ಎಂಟಿಬಿ ನಾಗರಾಜ್

Public TV
1 Min Read

ಬೆಂಗಳೂರು: ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ವಸತಿ ಸಚಿವನಾಗಿದ್ದವನು ರಾಜೀನಾಮೆ ನೀಡಿ ಬಿಜೆಪಿ ಸೇರಿದವನು. ಹಾಗಾಗಿ ಅದಕ್ಕಿಂತ ಉನ್ನತವಾದ ಖಾತೆಯನ್ನು ನೀಡ್ತಾರೆ ಅನ್ನೋ ನಿರೀಕ್ಷೆ ಇತ್ತು. ವಸತಿ ಖಾತೆಗಿಂತ ಒಳ್ಳೆಯ ಖಾತೆಗಳು ಯಾವುದು ಅನ್ನೋದು ಸಿಎಂಗೆ ಗೊತ್ತಿದೆ. ಲೋಕೋಪಯೋಗಿ, ಇಂಧನ, ಸಾರಿಗೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಇಲಾಖೆಗಳನ್ನು ನನಗೆ ನೀಡಬಹುದಿತ್ತು. ಆದ್ರೆ ಸಿಎಂ ಬೊಮ್ಮಾಯಿ ಅವರು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ನೀಡಿದ್ದಾರೆ ಎಂದು ಎಂಟಿಬಿ ನಾಗರಾಜ್ ಬೇಸರ ಹೊರ ಹಾಕಿದರು.

ಖಾತೆ ಬದಲಿಸುತ್ತಾರಾ ಅನ್ನೋ ನಂಬಿಕೆ ನನಗಿಲ್ಲ. ಖಾತೆ ಹಂಚಿಕೆಯಿಂದಾಗಿ ಬೇಸರವಾಗಿದ್ರೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಮಾತಾಡಿ ನಿರ್ಧಾರ ಮಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ. ನಾನು ಸಿಎಂ ಬೊಮ್ಮಾಯಿ ಅವರ ಮಾತನ್ನು ಒಪ್ಪಿದ್ದೇನೆ ಎಂದರು.

ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ನನ್ನ ಹೇಳಿಕೆಗೆ ಇವತ್ತು ಸಹ ಬದ್ಧನಾಗಿದ್ದೇನೆ. ಸುಮಾರು ಮೂವತ್ತಕ್ಕೂ ಹೆಚ್ಚು ನಿಮಿಷ ಸಿಎಂ ಜೊತೆ ಮಾತನಾಡಿದ್ದು, ಅವರು ಸಹ ಕೆಲ ಸಲಹೆಗಳನ್ನು ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಕಾರಣವಾದ 17 ಜನರಲ್ಲಿ ಕೇವಲ ಮೂವರಿಗೆ ಮಾತ್ರ ಒಳ್ಳೆಯ ಖಾತೆ ನೀಡಿರುವುದು ಬೇಸರಕ್ಕೆ ಕಾರಣವಾಗಿದೆ ಎಂದರು. ಇದನ್ನೂ ಓದಿ: ಮಂತ್ರಿ ಆಗದೇ ಇರುವದಕ್ಕೆ ಬೇಜಾರಿಲ್ಲ: ಲಕ್ಷ್ಮಣ ಸವದಿ

ಇದೇ ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು. ಆದ್ರೆ ಇಬ್ಬರು ನಡುವಿನ ಸಭೆ ವಿಫಲವಾಗಿದೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಆನಂದ್ ಸಿಂಗ್ ಹಿಂದೇಟು ಹಾಕಿದರು. ಇದನ್ನೂ ಓದಿ: ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್

Share This Article
Leave a Comment

Leave a Reply

Your email address will not be published. Required fields are marked *