ಎಸ್‍ಪಿಗೆ ಧನ್ಯವಾದ ಸಲ್ಲಿಸಿ, ಲವ್ ಯೂ ಸರ್ ಅಂದ್ರು ಸಲ್ಮಾನ್ ಖಾನ್

Public TV
2 Min Read

– ಶೀಘ್ರ ಗುಣಮುಖರಾಗುವಂತೆ ಹಾರೈಕೆ

ನವದೆಹಲಿ: ಕಳೆದ 24 ಗಂಟೆಯಿಂದ ಗಾನಗಾರುಡಿಗ ಎಸ್‍ಪಿ ಬಾಲಸುಬ್ರಹ್ಮಣ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಶೀಘ್ರ ಗುಣಮುಖರಾಗುವಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾರೈಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ನಟ ಮೊದಲು ಎಸ್‍ಪಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ?
ಬಾಲಸುಬ್ರಹ್ಮಣ್ಯಂ ಸರ್, ನಿಮ್ಮ ಆರೋಗ್ಯ ಬೇಗ ಸುಧಾರಿಸಲಿ ಎಂದು ನಾನು ಮನಸಾರೆ ಹಾರೈಸುತ್ತೇನೆ. ನೀವು ನನಗೋಸ್ಕರ ಹಾಡಿರುವ ಎಲ್ಲ ಹಾಡುಗಳು ನನಗೆ ತುಂಬಾ ಸ್ಪೆಷಲ್ ಆಗಿವೆ. ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್, ಲವ್ ಯೂ ಸರ್ ಎಂದು ಬರೆದುಕೊಂಡಿದ್ದಾರೆ.

90ರ ದಶಕದಲ್ಲಿ ಎಸ್‍ಪಿಬಿ ಅವರು ಸಲ್ಮಾನ್ ಖಾನ್ ಸಿನಿಮಾಗಳಿಗೆ ದನಿಯಾಗುತ್ತಿದ್ದರು. ತುಮ್ ಸೆ ಮಿಲ್ನೆ ಕಿ ತಮನ್ನಾ ಹೈ, ಕಭಿ ತು ಚಾಲಿಯಾ, ಲಗ್ತಾ ಹೈ, ಪೆಹ್ಲಾಪ್ಯಾರ್ ಹೈ, ದಿಲ್ ದಿವಾನಾ ಹೀಗೆ ಸಲ್ಮಾನ್ ಸಿನಿಮಾದ ಅನೇಕ ಹಾಡುಗಳನ್ನು ಎಸ್‍ಪಿಬಿ ಹಾಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್ 5ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‍ಪಿಬಿ ಆರೋಗ್ಯ ದಿಢೀರ್ ಗಂಭೀರವಾಗಿದೆ. 24 ಗಂಟೆಗಳಿಂದ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ನಿನ್ನೆ ಸಂಜೆ ಆಸ್ಪತ್ರೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಎಸ್‍ಪಿಬಿ ಆರೋಗ್ಯ ಚಿಂತಾಜನಕವಾಗಿದೆ ಎಂಬ ಮಾಹಿತಿ ತಿಳಿದ ಕೂಡಲೇ ನಟ ಕಮಲ್ ಹಾಸನ್ ಆಸ್ಪತ್ರೆಗೆ ಭೇಟಿ ನೀಡಿದರು.

ಕೆಲವು ದಿನಗಳ ಹಿಂದೆ ವಿಡಿಯೋ ಪೋಸ್ಸ್ ಮಾಡಿದ್ದ ಎಸ್‍ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

ತಂದೆಯ ಆರೋಗ್ಯ ಸುಧಾರಣೆಯಾಗುತ್ತಿದೆ. ಅವರು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಸ್ಪತ್ರೆಯಲ್ಲಿ ಆಚರಿಸಿದ್ದಾರೆ. ಈಗ ಆಸ್ಪತ್ರೆಯಲ್ಲೇ ಎಸ್‍ಪಿಬಿ ಟೆನ್ನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ ಎಂದು ಚರಣ್ ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *