– 25,346 ಜನ ಗುಣಮುಖರಾಗಿ ಡಿಸ್ಚಾರ್ಜ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಏಪ್ರಿಲ್ 15ರ ಬಳಿಕ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆಯಾಗಿದೆ. ಇಂದು 13,800 ಹೊಸ ಪ್ರಕರಣಗಳು ವರದಿಯಾಗಿವೆ. 365 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.9.69ಕ್ಕೆ ಇಳಿಕೆಯಾಗಿದೆ.
ಇಂದು 25,346 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 2,68,275 ಸಕ್ರಿಯ ಪ್ರಕರಣಗಳಿವೆ. ಇಂದು ಕೊರೊನಾಗೆ 365 ಸೋಂಕಿತರು ಸಾವನ್ನಪ್ಪಿದ್ದು, ಮರಣ ಪ್ರಮಾಣ ಶೇ.2.64ಕ್ಕೆ ತಲುಪಿದೆ. ಇದುವರೆಗೂ ರಾಜ್ಯದಲ್ಲಿ 31,260 ಜನರನ್ನು ಕೊರೊನಾ ಬಲಿ ಪಡೆದುಕೊಂಡಿದೆ.
ಇಂದು ಒಟ್ಟು 1,42,291 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 2,686 ಜನರು ಸೋಂಕಿಗೆ ತುತ್ತಾದ್ರೆ, 206 ಸೋಂಕಿತರು ಸಾವನ್ನಪ್ಪಿದ್ದಾರೆ. 8,852 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ. ಸದ್ಯ ಬೆಂಗಳೂರಿನಲ್ಲಿ 1,24,807 ಸಕ್ರಿಯ ಪ್ರಕರಣಗಳಿವೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 175, ಬಳ್ಳಾರಿ 345, ಬೆಳಗಾವಿ 847, ಬೆಂಗಳೂರು ಗ್ರಾಮಾಂತರ 326, ಬೆಂಗಳೂರು ನಗರ 2,686, ಬೀದರ್ 23, ಚಾಮರಾಜನಗರ 340, ಚಿಕ್ಕಬಳ್ಳಾಪುರ 432, ಚಿಕ್ಕಮಗಳೂರು 378, ಚಿತ್ರದುರ್ಗ 449, ದಕ್ಷಿಣ ಕನ್ನಡ 714, ದಾವಣಗೆರೆ 529, ಧಾರವಾಡ 247, ಗದಗ 152, ಹಾಸನ 568, ಹಾವೇರಿ 88, ಕಲಬುರಗಿ 69, ಕೊಡಗು 255, ಕೋಲಾರ 424, ಕೊಪ್ಪಳ 279, ಮಂಡ್ಯ 562, ಮೈಸೂರು 1,155, ರಾಯಚೂರು 110, ರಾಮನಗರ 57, ಶಿವಮೊಗ್ಗ 710, ತುಮಕೂರು 695, ಉಡುಪಿ 552, ಉತ್ತರ ಕನ್ನಡ 325, ವಿಜಯಪುರ 254 ಮತ್ತು ಯಾದಗಿರಿಯಲ್ಲಿ 54 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.