ಕನ್ನಡಿಗ ಗೌತಮ್, ಚಹಲ್‍ಗೆ ಕೊರೊನಾ

Public TV
1 Min Read

ಕೊಲಂಬೋ: ನಿಗದಿತ ಓವರ್‍ ಗಳ ಕ್ರಿಕೆಟ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಂಡ ಭಾರತ ತಂಡಕ್ಕೆ ಕೊರೊನಾ ಆಘಾತ ನೀಡಿದೆ. ಇದೀಗ ಕನ್ನಡಿಗ ಕೃಷ್ಣಪ್ಪ ಗೌತಮ್ ಮತ್ತು ಯಜುವೇಂದ್ರ ಚಹಲ್‍ಗೆ ಕೊರೊನಾ ದೃಢಪಟ್ಟಿದೆ.

ಶ್ರೀಲಂಕಾ ನಡುವಿನ 2ನೇ ಟಿ20 ಪಂದ್ಯಕ್ಕೂ ಮುನ್ನ ಕೃನಾಲ್ ಪಾಂಡ್ಯಗೆ ಕೊರೊನಾ ಪಾಸಿಟಿವ್ ಆಗಿತ್ತು. ಆ ಬಳಿಕ ಅವರ ಸಂಪರ್ಕಹೊಂದಿದ್ದ 8 ಮಂದಿ ಆಟಗಾರರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಲ್ಲಿ ಇಬ್ಬರು ಆಟಗಾರರಾದ ಗೌತಮ್ ಮತ್ತು ಚಹಲ್‍ಗೆ ಕೊರೊನಾ ಪಾಸಿಟಿವ್ ಆಗಿದೆ.

ಈಗಾಗಲೇ ಟಿ20 ಮತ್ತು ಏಕದಿನ ಸರಣಿ ಮುಗಿಸಿಕೊಂಡು ಭಾರತ ತಂಡ ಇಂದು ತವರಿಗೆ ಆಗಮಿಸುವ ನಿರೀಕ್ಷೆ ಇದ್ದು, ಕೊರೊನಾ ಪಾಸಿಟಿವ್ ಬಂದ ಆಟಗಾರರು ಐಸೋಲೇಷನ್ ನಲ್ಲಿ ಅಲ್ಲೇ ಉಳಿದುಕೊಳ್ಳುವ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಪದಕ ಖಚಿತ – ಸೆಮಿಗೆ ಲವ್ಲೀನಾ ಎಂಟ್ರಿ

ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ತಂಡ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದರೆ, ಟಿ20 ಸರಣಿಯನ್ನು 1-2 ಅಂತರದಲ್ಲಿ ಸೋತು ಮಿಶ್ರ ಫಲ ಅನುಭವಿಸಿದೆ.

Share This Article
Leave a Comment

Leave a Reply

Your email address will not be published. Required fields are marked *