ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲ ಬೇಡ : ಶಂಕರ ಪಾಟೀಲ್ ಮುನೇನಕೊಪ್ಪ

Public TV
1 Min Read

– ಮಹದಾಯಿ ಹೋರಾಟದಿಂದ ಇಂದು ಅಧಿಕಾರದಲ್ಲಿದ್ದೇವೆ

ಹುಬ್ಬಳ್ಳಿ: ಮಹಾದಾಯಿ ಹೋರಾಟದಲ್ಲಿ ನಾವೆಲ್ಲಾ ಪಾಲ್ಗೊಂಡಿದ್ದೇವೆ. ನಾನು ಸಹ ಕಳಸಾ ಬಂಡೂರಿ ಹೋರಾಟದಿಂದಲೇ ಬಂದವನು. ಮಹದಾಯಿ ಹೋರಾಟದಲ್ಲಿ ನಾವೆಲ್ಲಾ ಪಾಲ್ಗೊಂಡಿದ್ದಕ್ಕೆ ಇಂದು ಅಧಿಕಾರದಲ್ಲಿದ್ದೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.

ನೂತನ ಸಚಿವರಾದ ಮೇಲೆ ಮೊದಲ ಬಾರಿಗೆ ಹುಬ್ಬಳ್ಳಿಗೆ ಶಂಕರಪಾಟೀಲ್ ಮುನೇನಕೊಪ್ಪ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲದ ಹೇಳಿಕೆ ಬೇಡವೆಂದು ತಿಳಿಸಿದ್ದಾರೆ.

ಮಹಾದಾಯಿ ಹೋರಾಟ ವಿಚಾರದಲ್ಲಿ ಈಗಾಗಲೇ ಟ್ರಿಮಿನಲ್ ಆದೇಶ ಆಗಿದೆ. 4 ಟಿಎಂಸಿ ಕುಡಿಯುವ ನೀರಿನ ಆದೇಶ ದೊರೆತಿದೆ. ಸಣ್ಣ ಪುಟ್ಟ ತೊಡಕುಗಳನ್ನು ಬಗೆಹರಿಸಿ ಯೋಜನೆಯನ್ನು ಜಾರಿ ಮಾಡುತ್ತೇವೆ. ಈ ವಿಚಾರದಲ್ಲಿ ಮೂರು ರಾಜ್ಯಗಳ ಸಹಕಾರ ಅಗತ್ಯವಾಗಿದೆ. ಗೊಂದಲಗಳು ಆಗಬಾರದು 330 ಹಳ್ಳಿಗಳಿಗೂ ನೀರು ಕೊಡುವ ಯೋಜನೆ ಮಾಡುತ್ತಿದ್ದೇವೆ. ಹೀಗಾಗಿ ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲದ ಹೇಳಿಕೆ ನೀಡುವುದು ಬೇಡವೆಂದು ಮನವಿ ಮಾಡಿದರು. ಅಲ್ಲದೇ ಇನ್ನೂ 60 ದಿನಗಳಲ್ಲಿ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪಕ್ಷ ಬಹು ದೊಡ್ಡ ಜವಾಬ್ದಾರಿಯಿಂದ ನನಗೆ ಸ್ಥಾನ ಕೊಟ್ಟಿದೆ. ಹೀಗಾಗಿ ಮುಖ್ಯ ಮಂತ್ರಿಗಳು ಯಾವ ಸ್ಥಾನ ನೀಡಿದರೂ ಸಮರ್ಥವಾಗಿ ನಿಭಾಯಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ಓಕೆ: ಮುರುಗೇಶ್ ನಿರಾಣಿ

Share This Article
Leave a Comment

Leave a Reply

Your email address will not be published. Required fields are marked *