ಕಾಂಗ್ರೆಸ್ ಕಚೇರಿಯಲ್ಲಿ ಬಡಿದಾಟ- ನಾರಾಯಣಸ್ವಾಮಿ ಮೇಲೆ ಮನೋಹರ್ ಬೆಂಬಲಿಗರಿಂದ ಹಲ್ಲೆ

Public TV
1 Min Read

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಹೈ ಡ್ರಾಮಾ ನಡೆದಿದ್ದು, ರಾಮಲಿಂಗಾರೆಡ್ಡಿ ಜೊತೆ ಮಾತನಾಡುವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಮೇಲೆ ಕಾಂಗ್ರೆಸ್ ಮುಖಂಡ ಮನೋಹರ್ ಹಲ್ಲೆ ನಡೆಸಿದ್ದಾರೆ.

ಕಾಂಗ್ರೆಸ್ ನೂತನ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದರು. ರಾಮಲಿಂಗಾರೆಡ್ಡಿ ಜೊತೆ ಮಾತನಾಡುವ ವಿಷಯದಲ್ಲಿ ಎಂಎಲ್‌ಸಿ ನಾರಾಯಣ ಸ್ವಾಮಿ ಹಾಗೂ ಮನೋಹರ್ ನಡುವೆ ವಾಗ್ವಾದ ನಡೆದಿದೆ. ಹೀಗಾಗಿ ರಾಮಲಿಂಗಾರೆಡ್ಡಿ ಕೆಪಿಸಿಸಿ ಕಚೇರಿಯಿಂದ ಹೊರ ಹೋದ ನಂತರ ನಾರಾಯಣ ಸ್ವಾಮಿ ಹಾಗೂ ಮನೋಹರ್ ನಡುವೆ ಗಲಾಟೆ ನಡೆದಿದೆ.

ಗಲಾಟೆ ವೇಳೆ ಎಂಎಲ್‌ಸಿ ನಾರಾಯಣ ಸ್ವಾಮಿಗೆ ಮನೋಹರ್ ಹಾಗೂ ಬೆಂಬಲಿಗರು ಹೊಡೆದು ಹಲ್ಲೆ ನಡೆಸಿದ್ದಾರೆ. ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಎರಡೂ ಕಡೆಯವರನ್ನು ಕೂರಿಸಿ ಮಾತನಾಡಿ, ರಾಜೀ ಮಾಡಿಸಿ ಸಮಾಧಾನ ಪಡಿಸಿದ್ದಾರೆ. ಬಳಿಕ ನಾರಾಯಣ ಸ್ವಾಮಿಯವರು ತಮ್ಮ ಸರ್ಕಾರಿ ಕಾರಿನಲ್ಲಿ ಕೆಪಿಸಿಸಿ ಕಚೇರಿಯಿಂದ ತೆರಳಿದ್ದಾರೆ. ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *