ಕಾಡಾನೆಗಳ ಹಾವಳಿ – ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ

Public TV
1 Min Read

ಹುಬ್ಬಳ್ಳಿ: ಕಾಡಾನೆಗಳ ಹಾವಳಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಮೀತಿಮೀರಿದ್ದು, ಕಾಡಾನೆಗಳ ಹಾವಳಿಯಿಂದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಸುತ್ತಮುತ್ತಲಿನ ಹೊಲಗಳಿಗೆ ಲಗ್ಗೆ ಇಟ್ಟಿರುವ 5 ಕಾಡಾನೆಗಳ ಗುಂಪು ರೈತರ ಬೆಳೆಗಳನ್ನೆಲ್ಲಾ ಹಾನಿ ಮಾಡಿದ್ದು, ರೈತರು ಭಯಭೀತರಾಗಿದ್ದಾರೆ.

ಮುಂಡಗೋಡ್ ಅರಣ್ಯ ಪ್ರದೇಶದಿಂದ ಆಗಮಿಸಿರುವ 5 ಕಾಡಾನೆಗಳನ್ನ ಮರಳಿ ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಗೆ ಬಗ್ಗದ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯುಂಟು ಮಾಡುತ್ತಿರುವುದರಿಂದ ರೈತರು ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟ ಅನುಭವಿಸುವಂತಾಗಿದೆ.

ಕಳೆದ ಹಲವಾರು ವರ್ಷಗಳಿಂದ ಅರಣ್ಯದಿಂದ ಆಗಮಿಸುವ ಕಾಡಾನೆಗಳ ಹಿಂಡು ಬೆಳೆ ಹಾನಿ ಮಾಡಿದರೂ ಪರಿಹಾರ ಸಿಗದಿರುವುದರಿಂದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾನಿಗೊಳಗಾದ ಬೆಳೆಗೆ ಪರಿಹಾರ ನೀಡಬೇಕು. ಕಾಡಾನೆಗಳ ಹಾವಳಿ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *