ಕಾರ್ ಕೆಳಗೆ ಸಿಲುಕಿ ಅಪ್ಪಚ್ಚಿಯಾದ ಸ್ಕೂಟಿ – ಸವಾರ ಸಾವು

Public TV
0 Min Read

ಹಾವೇರಿ: ರಾಣೆಬೆನ್ನೂರು ನಗರದ ಪಿ.ಬಿ ರಸ್ತೆಯಲ್ಲಿ ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಸ್ಕೂಟಿ ಮೇಲೆ ಕಾರ್ ಹರಿದ ಪರಿಣಾಮ ದ್ವಿಚಕ್ರ ಅಪ್ಪಚ್ಚಿಯಾಗಿದೆ.

52 ವರ್ಷದ ಶಂಕರಗೌಡ ಪಾಟೀಲ್ ಮೃತ ದ್ವಿಚಕ್ರ ಸವಾರ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಸ್ಕೂಟಿಗೆ ಡಿಕ್ಕಿಯಾದ ಕಾರ್ ಡಿವೈಡರ್ ಮೇಲೆ ಬಂದು ನಿಂತಿದೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ರಾಣೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಾಣೆಬೆನ್ನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ,

Share This Article
Leave a Comment

Leave a Reply

Your email address will not be published. Required fields are marked *