ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಪೂಜೆಗಾಗಿ ರಾತ್ರಿ ಪೂರ್ತಿ ಸಾಲಲ್ಲಿ ನಿಂತ ಭಕ್ತರು

Public TV
1 Min Read

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಲ ದಿನಗಳಿಂದ ಹೆಚ್ಚಿನ ಭಕ್ತರು ಭೇಟಿ ನೀಡುತ್ತಿದ್ದು, ಆಶ್ಲೇಷ ಪೂಜೆಗಾಗಿ ರಾತ್ರಿ ಪೂರ್ತಿ ಸಾಲಲ್ಲಿ ನಿಂತಿದ್ದಾರೆ.

ನಾಳೆ ಸೋಮವಾರ ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಸೋಮವಾರದ ಸೇವೆ ನೆರವೇರಿಸಲು ಭಾನುವಾರ ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ಭಾನುವಾರ ರಾತ್ರಿಯೇ ಕ್ಷೇತ್ರದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನೆಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *