ಕೃಷಿ ಇಲಾಖೆ ಮೂವರು ನೌಕರರು ಕೊರೊನಾಗೆ ಬಲಿ

Public TV
1 Min Read

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ಮಹಾಮಾರಿ ಕೊರೊನಾ ಕಾಟ ಹೆಚ್ಚಾಗಿದ್ದು, ಕೃಷಿ ಇಲಾಖೆಯ ಮೂರು ಮಂದಿ ನೌಕರರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಕೃಷಿ ಇಲಾಖೆ ಮೂರು ಮಂದಿ ನೌಕರರು ಸಾವನ್ನಪ್ಪಿದ್ದು, ಜಿಲ್ಲಾ ಪೊಲೀಸ್ ಇಲಾಖೆಯಲ್ಲೂ ಕೂಡ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧಿಕೃತ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಸೇರಿ ಮೂವರು ಸಾವ್ನಪ್ಪಿದ್ದಾರೆ. ಮಹಾಮಾರಿ ಕೋವಿಡ್ ಸೋಂಕಿನಿಂದ ಸಹಾಯಕ ನಿರ್ದೇಶಕ ಹಾಗೂ ಇಬ್ಬರು ಎಫ್‍ಡಿಎ ನೌಕರರು ಬಳಲುತ್ತಿದ್ದರು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *