ಕೆಂಪೇಗೌಡ ಜಯಂತಿ – 60 ಟನ್ ತರಕಾರಿ ವಿತರಿಸಿದ ಸೋಮಶೇಖರ್

Public TV
1 Min Read

ಬೆಂಗಳೂರು: ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗಾಗಿ ಸಚಿವ ಎಸ್.ಟಿ ಸೋಮಶೇಖರ್ ರೈತರಿಂದ 60 ಟನ್ ತರಕಾರಿ ಖರೀದಿಸಿ ಕ್ಷೇತ್ರದ ಜನತೆಗೆ ವಿತರಣೆ ಮಾಡಿದ್ದಾರೆ. ಯಶವಂತಪುರ ಕ್ಷೇತ್ರ ವ್ಯಾಪ್ತಿ 17 ಸಾವಿರ ತರಕಾರಿ ಕಿಟ್‍ಗಳನ್ನ ಸಿದ್ದಪಡಿಸಿ ಜನತೆಗೆ ವಿತರಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ವಾರ್ಡ್ 72ರ ಬ್ಯಾಡರಹಳ್ಳಿ ಪೊಲೀಸ್ ಸ್ಟೇಷನ್ ಪಕ್ಕದ ಬಿಡಿಎ ಸಂಪರ್ಕ ರಸ್ತೆಯಲ್ಲಿ ಸಚಿವರು ತರಕಾರಿ ಕಿಟ್ ವಿತರಣೆ ಮಾಡಿದ್ದಾರೆ. ಕೊರೊನಾ ಸಂಕಷ್ಟ ಕಾಲದಲ್ಲಿ ರೈತರಿಗೂ ಸಹ ಅನುಕೂಲವಾಗಬೇಕು. ಜೊತೆಗೆ ಆರ್ಥಿಕವಾಗಿ ಹಿಂದುಳಿದ ಜನತೆಗೆ, ಕಷ್ಟದಲ್ಲಿರುವವರಿಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ತರಕಾರಿಗಳನ್ನು ಸ್ವಂತ ಖರ್ಚಿನಲ್ಲಿ ಖರೀದಿಸಿ ಉಚಿತವಾಗಿ ವಿತರಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ನನಗೆ ಕ್ಷೇತ್ರದ ಕೆಲಸ ಮಾಡುವ ಸಂಬಂಧ ಜನತೆ ಮತ ನೀಡಿ ಆಶೀರ್ವದಿಸಿ ಕಳಿಸಿದ್ದಾರೆ. ಈಗ ಜನತೆ ಕೃಪೆಯಿಂದ ಸಚಿವನೂ ಆಗಿದ್ದೇನೆ. ಹೀಗಾಗಿ ನನಗೆ ಮತ ನೀಡಿದವರ ಋಣ ತೀರಿಸುವ ಸಮಯ ಇದಾಗಿದ್ದರಿಂದ ಅವರಿಗೆ ಸಹಾಯವಾಗುವ ಒಂದಷ್ಟು ಕೆಲಸವನ್ನು ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದವರ ಕುಟುಂಬದಲ್ಲಿ ಕೊರೊನಾದಿಂದ ಮೃತಪಟ್ಟರೆ ಕುಟುಂಬದವರಿಗೆ ವೈಯಕ್ತಿಕವಾಗಿ 1 ಲಕ್ಷ ರೂ. ಸಹಾಯಧನ ವಿತರಣೆ ಮಾಡುವುದು, ಆಸ್ಪತ್ರೆಗೆ ದಾಖಲಾಗಿದ್ದರೆ ಪರಿಸ್ಥಿತಿ ನೋಡಿಕೊಂಡು ಧನ ಸಹಾಯ ಮಾಡುವುದು, ಪಡಿತರ ಕಿಟ್, ವೈದ್ಯಕೀಯ ಕಿಟ್ ಸೇರಿದಂತೆ ತರಕಾರಿ ಕಿಟ್ ಗಳನ್ನು ಸಹ ವಿತರಣೆ ಮಾಡುವ ಮೂಲಕ ಅವರಿಗೆ ಸ್ಪಂದಿಸುವ ಕಾರ್ಯವನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ:ಬಿಜೆಪಿಯವರು ಕಾಂಗ್ರೆಸ್‍ಗೆ ಸಪೋರ್ಟ್ ಮಾಡ್ತೀವಿ ಸಿಎಂ ಆಗಿ ಎಂದಿದ್ದಾರೆ: ಎಸ್.ಎಸ್ ಮಲ್ಲಿಕಾರ್ಜುನ್

Share This Article
Leave a Comment

Leave a Reply

Your email address will not be published. Required fields are marked *