ಕೆಎಎಸ್ ಅಧಿಕಾರಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ನಗದು!

Public TV
1 Min Read

– ಖಜಾನೆ ನೋಡಿ ಅಧಿಕಾರಿಗಳು ಶಾಕ್
– ಸರ್ಕಾರಿ ಅಧಿಕಾರಿಯ ಹೈಫೈ ಲೈಫ್

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಖಜಾನೆ ನೋಡಿ ಅಧಿಕಾರಿಗಳೇ ದಂಗಾಗಿದ್ದಾರೆ.

ಕೊಡಿಗೇಹಳ್ಳಿಯ ಭವ್ಯ ಬಂಗಲೆಯಲ್ಲಿ ವಾಸವಾಗಿರುವ ಸುಧಾ ಬಳಿ ಕೆಜಿ ಗಟ್ಟಲೆ ಚಿನ್ನಾಭರಣ ಹಾಗೂ ಸುಮಾರು 10 ಲಕ್ಷ ನಗದು ಸಿಕ್ಕಿದೆ. ಚಿನ್ನದ ಡಾಬಾ, ಕಾಸಿನ ಸರ, ಉಂಗುರಗಳನ್ನು ಜಪ್ತಿ ಮಾಡಲಾಗಿದೆ. ಚಿನ್ನದ ಸರಗಳ ರಾಶಿ ಹಾಗೂ ಕಿವಿಯೋಲೆಗಳು ಪತ್ತೆಯಾಗಿವೆ.

ಸತತ 5 ಗಂಟೆಯಿಂದ ಸುಧಾ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ದಾಳಿ ಮಾಡಿದಾಗ ಅಧಿಕಾರಿ ಸುಮಾರು ಅರ್ಧ ಗಂಟೆಗಳ ಕಾಲ ಡೋರ್ ಓಪನ್ ಮಾಡದೇ ಇದ್ದರು.

ಸುಧಾ ಅವರ ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರದ ಕುರಿತಾಗಿ ದೂರು ದಾಖಲಾಗಿತ್ತು. ಸುಧಾ ಪ್ರಸ್ತುತ ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *