ಕೊರೊನಾಗೆ ತುತ್ತಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ – ಬೆಳಗಾವಿ ಸಂಸದರ ನಿಧನಕ್ಕೆ ಪ್ರಧಾನಿ ಕಂಬನಿ

Public TV
1 Min Read

– ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಕೊರೊನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದು, ಸಂಸದರ ನಿಧನಕ್ಕೆ ಪ್ರಧಾನಿಗಳು ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಬಿಜೆಪಿ ದೊಡ್ಡ ಆಘಾತವಾಗಿದೆ. ಕೆಲ ದಿನಗಳ ಹಿಂದೆ ರಾಜ್ಯಸಭಾ ಸಂಸದ ಅಶೋಕ್ ಗಸ್ತಿ ಸಹ ಕೊರೊನಾಗೆ ಬಲಿಯಾಗಿದ್ದರು.

ರಾಜ್ಯ ಬಿಜೆಪಿಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಸಚಿವರು ಸೇರಿದಂತೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. ಇನ್ನು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಸಹೋದ್ಯೋಗಿ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ರು. ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದರು. ರಾಜ್ಯಕ್ಕೆ ಒಳ್ಳೆಯ ಕೆಲಸಗಳನ್ನ ಮಾಡಬೇಕೆಂಬ ತುಡಿತದಲ್ಲಿದ್ದರು. ಆದ್ರೆ ಇಂದು ನಮ್ಮೊಂದಿಗೆ ಇಲ್ಲ ಎಂದು ಭಾವುಕರಾದರು.

ಇನ್ನು ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಸಿ.ಟಿ.ರವಿ, ವಿ.ಸೋಮಣ್ಣ, ಶ್ರೀರಾಮುಲು, ಸುಧಾಕರ್ ಸೇರಿದಂತೆ ಹಲವು ಗಣ್ಯರು ಅಂಗಡಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *