ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿನಿ, ಅಧಿಕಾರಿಗಳಿಂದ ಮನವೊಲಿಕೆ- ಸುರೇಶ್ ಕುಮಾರ್ ಮೆಚ್ಚುಗೆ

Public TV
1 Min Read

ಧಾರವಾಡ: ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ಹಾಗೂ ಅಧಿಕಾರಿಗಳು ಮನವೊಲಿಸಿ, ಪರೀಕ್ಷೆ ಬರೆಸಿದ್ದಾರೆ.

ಧಾರವಾಡದ ಅಳ್ನಾವರ ತಾಲೂಕಿನ ವಿದ್ಯಾರ್ಥಿನಿ ನಿರೀಕ್ಷಾ(ಹೆಸರು ಬದಲಿಸಲಾಗಿದೆ) ಕೊರೊನಾ ಭಯದಿಂದ ದ್ವಿತೀಯ ಭಾಷೆ ಪರೀಕ್ಷೆಗೆ ಗೈರಾಗಿದ್ದಳು. ಪಾಲಕರು ಸಹ ಏನೂ ಮಾತನಾಡಿರಲಿಲ್ಲ. ಆದರೆ ಪರೀಕ್ಷೆಗೆ ಗೈರಾಗಿದ್ದನ್ನು ಗಮನಿಸಿದ ಶಿಕ್ಷಕರು ಹಾಗೂ ಅಧಿಕಾರಿಗಳು, ಇಂದು ಬಾಲಕಿ ಮನೆಗೆ ತೆರಳಿ ವಿದ್ಯಾರ್ಥಿನಿ ಹಾಗೂ ಪೋಷಕರನ್ನು ಮನವೊಲಿಸಿದ್ದಾರೆ. ಅಧಿಕಾರಿಗಳ ಮನವೊಲಿಕೆ ಬಳಿಕ ಅಳ್ನಾವರದ ಕಸ್ತೂರಬಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಇಂದು ಗಣಿತ ಪರೀಕ್ಷೆ ಬರೆದಿದ್ದಾಳೆ.

ಮೊದಲ ದಿನ ನಿರೀಕ್ಷಾ ಪರೀಕ್ಷೆಗೆ ಗೈರಾಗಿದ್ದನ್ನು ಮನಗಂಡ ಅಧಿಕಾರಿಗಳು, ಇಂದು ಖುದ್ದು ಅವರ ಮನೆಗೆ ತೆರಳಿ ಪೋಷಕರು ಹಾಗೂ ನಿರೀಕ್ಷಾ ಮನವೊಲಿಸಿದ್ದಾರೆ. ಹೀಗಾಗಿ ಇಂದು ಗಣಿತ ಪರೀಕ್ಷೆ ಬರೆದಿದ್ದಾರೆ. ಶಿಕ್ಷಕರು ಮತ್ತು ಅಧಿಕಾರಿಗಳ ಈ ಕಾರ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *