ಕೊರೊನಾ ನಡುವೆಯೂ ಹಾಲಿ-ಮಾಜಿ ಶಾಸಕರ ಬೆಂಬಲಿಗರ ಗುದ್ದಾಟ

Public TV
1 Min Read

ಮಂಡ್ಯ: ರಾಜ್ಯದಲ್ಲಿ ದಿನೇ ದಿನೇ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸದ ನಡುವೆಯೂ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಗುದ್ದಾಟ ನಡೆದಿದೆ.

ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‍ನ ವಾಣಿಜ್ಯ ಮಳಿಗೆಗಳ ಉದ್ಘಾಟನೆ ವೇಳೆ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಗುದ್ದಾಟ ನಡೆದಿದೆ.

ಉದ್ಘಾಟನೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯರನ್ನ ಆಹ್ವಾನಿಸದೆ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡರನ್ನ ಆಹ್ವಾನಿಸಿದ್ದಕ್ಕೆ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇಬ್ಬರು ಬೆಂಬಲಿಗರ ನಡುವೆ ವಾಗ್ವಾದ ಮತ್ತು ಮಾತಿನ ಚಕಮಕಿ ನಡೆದಿದೆ.

ಅಲ್ಲದೇ ಕೈ ಕೈ ಮಿಲಾಯಿಸುವ ಹಂತಕ್ಕೆ ಬೆಂಬಲಿಗರು ಹೋಗಿದ್ದರು. ಇದರಿಂದ ಕೊರೊನಾ ಅಟ್ಟಹಾಸದ ನಡುವೆಯೂ ಮಾಸ್ಕ್, ಸಾಮಾಜಿಕ ಅಂತರವೂ ಇಲ್ಲದೆ ಬೆಂಬಲಿಗರು ವಾಗ್ವಾದ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *