ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಶಾಲೆಗಳು ಆರಂಭವಾಗಲಿ: ಕಿಮ್ಮನೆ

Public TV
1 Min Read

– ಸರ್ಕಾರ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡ್ಬಾರ್ದು

ಶಿವಮೊಗ್ಗ: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವ ಮುನ್ನ ಯಾವುದೇ ಕಾರಣಕ್ಕೂ ಶಾಲೆಗಳ ಪುನರ್ ಆರಂಭಕ್ಕೆ ಸರ್ಕಾರ ಮುಂದಾಗಬಾರದು. ಮಕ್ಕಳ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡಬಾರದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸರಿಯಾಗಿ ನಿಯಂತ್ರಣಕ್ಕೆ ಬಾರದ ಹೊರತು ಶಾಲೆ ಓಪನ್ ಮಾಡುವ ಪ್ರಯತ್ನ ನಡೆಸಬಾರದು ಎಂದರು.

ಮೋದಿ ಹಾಗೂ ಬಿ.ಎಸ್.ಯಡಿಯೂರಪ್ಪ ಅಧಿಕಾರದಲ್ಲಿ ಇರುವುದೇ ಒಂದು ದೊಡ್ಡ ದುರಂತ. ಕೊರೊನಾ ಕಡಿಮೆ ಇದ್ದ ಅವಧಿಯಲ್ಲಿ ಎಲ್ಲಾ ಬಂದ್ ಮಾಡಿದರು. ಸದ್ಯ ಕೊರೊನಾ ಸೋಂಕು ಹೆಚ್ಚಾಗಿದೆ. ಈ ವೇಳೆ ಎಲ್ಲಾ ಓಪನ್ ಮಾಡಿದ್ದಾರೆ. ಕೊರೊನಾದಿಂದಾಗಿ ಜನ ಸಾಯುತ್ತಿದ್ದಾರೆ. ಈಗಿರುವಾಗ ಶಾಲೆ ಆರಂಭದ ಬಗ್ಗೆ ಮಾತನಾಡುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬಂದ ನಂತರವೇ ಶಾಲೆ ಆರಂಭಿಸುವುದು ಒಳ್ಳೆಯದು ಎಂದರು.

ಮೊದಲೆಲ್ಲಾ ಕೊರೊನಾ ಹರಡಲು ಮುಸ್ಲಿಮರೇ ಕಾರಣ ಎಂದು ಹೇಳಿಕೊಂಡು ಓಡಾಡುತ್ತಿದ್ದರು. ಈಗ ಏನು ಹೇಳುತ್ತಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *