– ರಾಜ್ಯದಲ್ಲಿ 14,302 ಮಂದಿ ಡಿಸ್ಚಾರ್ಜ್
ಬೆಂಗಳೂರು: ಕೊರೊನಾ ಸಕ್ರಿಯ ಪ್ರಕರಣಗಳ ಪೈಕಿ ದೇಶದಲ್ಲಿ ಕರ್ನಾಟಕ ಮೂರನೇ ಸ್ಥಾನಕ್ಕೆ ಇಳಿದಿದೆ. ಇಂದು 3,203 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 94 ಮಂದಿ ಸಾವನ್ನಪ್ಪಿದ್ದಾರೆ.
ಇಂದು 14,302 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 65,312 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.05 ಮತ್ತು ಮರಣ ಪ್ರಮಾಣ ಶೇ.2.93ರಷ್ಟು ದಾಖಲಾಗಿದೆ. ಇದುವರೆಗೆ ರಾಜ್ಯದಲ್ಲಿ 35,134 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ ಒಟ್ಟು 1,56,078 ಸ್ಯಾಂಪಲ್ (ಆರ್ಟಿ ಪಿಸಿಆರ್ 1,19,603 + 36,475 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 676 ಮಂದಿಗೆ ಕೊರೊನಾ ಸೋಂಕು ತಗುಲಿದೆ. 10,840 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 18 ಮಂದಿ ಸಾವನ್ನಪ್ಪಿದ್ದು, ಸದ್ಯ ಸಿಲಿಕಾನ್ ಸಿಟಿಯಲ್ಲಿ 33,516 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇದುವರೆಗೂ ಮಹಾಮಾರಿ 15,644 ಜನರನ್ನು ಬಲಿ ಪಡೆದುಕೊಂಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?:
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 4, ಬಳ್ಳಾರಿ 34, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 75, ಬೆಂಗಳೂರು ನಗರ 676, ಬೀದರ್ 3, ಚಾಮರಾಜನಗರ 75, ಚಿಕ್ಕಬಳ್ಳಾಪುರ 40, ಚಿಕ್ಕಮಗಳೂರು 98, ಚಿತ್ರದುರ್ಗ 41, ದಕ್ಷಿಣ ಕನ್ನಡ 285, ದಾವಣಗೆರೆ 66, ಧಾರವಾಡ 27, ಗದಗ 15, ಹಾಸನ 281, ಹಾವೇರಿ 18, ಕಲಬುರಗಿ 21, ಕೊಡಗು 167, ಕೋಲಾರ 96, ಕೊಪ್ಪಳ 16, ಮಂಡ್ಯ 97, ಮೈಸೂರು 366, ರಾಯಚೂರು 6, ರಾಮನಗರ 9, ಶಿವಮೊಗ್ಗ 194, ತುಮಕೂರು 157, ಉಡುಪಿ 146, ಉತ್ತರ ಕನ್ನಡ 59, ವಿಜಯಪುರ 11 ಮತ್ತು ಯಾದಗಿರಿಯಲ್ಲಿ 6 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.