ಕೊರೊನಾ ಸುನಾಮಿ- ಬರೋಬ್ಬರಿ 34,804 ಕೇಸ್, 143 ಸಾವು- ತುಮಕೂರು 1,153, ಕೊಡಗು 1,077

Public TV
1 Min Read

– ಬೆಂಗಳೂರಿನಲ್ಲಿ 20,733 ಪಾಸಿಟಿವ್, 77 ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಭಯಾನಕ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಿದೆ. ಇಂದೂ ಸಹ ದಾಖಲೆಯ ಬರೋಬ್ಬರಿ 34,804 ಪ್ರಕರಣಗಳು ಪತ್ತೆಯಾಗಿದ್ದು, 143 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ. ಇತ್ತ ಉದ್ಯಾನ ನಗರಿ ಸ್ಥಿತಿ ಕ್ಷಣ ಕ್ಷಣಕ್ಕೂ ಭಯಾನಕವಾಗುತ್ತಿದ್ದು, ಇಂದು 20,733 ಜನರಿಗೆ ಕೊರೊನಾ ಸೋಂಕು ತಗುಲಿದೆ. ನಗರದಲ್ಲಿ ಇಂದು ಬರೋಬ್ಬರಿ 77 ಜನ ಸಾವನ್ನಪ್ಪಿದ್ದಾರೆ. ಸದ್ಯ ರಾಜಧಾನಿಯಲ್ಲಿ 1,80,542 ಸಕ್ರಿಯ ಪ್ರಕರಣಗಳಿದ್ದು, ಬೆಡ್ ಮತ್ತು ಆಕ್ಸಿಜನ್ ಕೊರತೆಯಿಂದ ಜನ ನರಳುವಂತಾಗಿದೆ.

ರಾಜ್ಯದಲ್ಲಿ 2,62,162 ಸಕ್ರಿಯ ಪ್ರಕರಣಗಳಿದ್ದು, 1,492 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ. ಇಂದು 6,982 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.19.70 ಮತ್ತು ಮರಣ ಪ್ರಮಾಣ ಶೇ.0.41ಕ್ಕೆ ಏರಿಕೆಯಾಗಿದೆ. ಈ ವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 14,426ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 390, ಬಳ್ಳಾರಿ 732, ಬೆಳಗಾವಿ 336, ಬೆಂಗಳೂರು ಗ್ರಾಮಾಂತರ 864, ಬೆಂಗಳೂರು ನಗರ 20,733, ಬೀದರ್ 406, ಚಾಮರಾಜನಗರ 284, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 247, ಚಿತ್ರದುರ್ಗ 100, ದಕ್ಷಿಣ ಕನ್ನಡ 564, ದಾವಣಗೆರೆ 242, ಧಾರವಾಡ 546, ಗದಗ 76, ಹಾಸನ 768, ಹಾವೇರಿ 99, ಕಲಬುರಗಿ 626, ಕೊಡಗು 1,077, ಕೋಲಾರ 782, ಕೊಪ್ಪಳ 152, ಮಂಡ್ಯ 814, ಮೈಸೂರು 700, ರಾಯಚೂರು 643, ರಾಮನಗರ 225, ಶಿವಮೊಗ್ಗ 418, ತುಮಕೂರು 1,153, ಉಡುಪಿ 319, ಉತ್ತರ ಕನ್ನಡ 243, ವಿಜಯಪುರ 468 ಮತ್ತು ಯಾದಗಿರಿಯಲ್ಲಿ 363 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Share This Article
Leave a Comment

Leave a Reply

Your email address will not be published. Required fields are marked *