ಕೊರೊನಾ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ- ಖಾಸಗಿ ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ

Public TV
1 Min Read

ಬೆಂಗಳೂರು: ಕೊರೊನಾ ಹೆಸರಲ್ಲಿ ದುಪ್ಪಟ್ಟು ಹಣ ಸೂಲಿಗೆ ಮಾಡಲು ಹೊರಟಿದ್ದ ಖಾಸಗಿ ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಐಎಎಸ್ ಅಧಿಕಾರಿ ಹರ್ಷ ಗುಪ್ತ ಮತ್ತು ಡಿ.ರೂಪ ನೇತೃತ್ವದ ತಂಡ ಖಾಸಗಿ ಆಸ್ಪತ್ರೆಯ ಮೇಲೆ ದಾಳಿ ಮಾಡಿದೆ. ದಾಳಿಯ ನಂತರ ರೋಗಿಯ ಬಳಿ ದುಪ್ಪಟ್ಟು ಹಣ ಪಡೆದಿರುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ತಪ್ಪೊಪ್ಪಿಕೊಂಡಿದೆ.

ಆಸ್ಪತ್ರೆ ದುಪ್ಪಟ್ಟ ಹಣ ಪಡೆದಿರುವ ಬಗ್ಗೆ ಅಧಿಕಾರಿಗಳ ಜೊತೆ ರೋಗಿ ತನ್ನ ಅಳಲು ತೊಡಿಕೊಂಡಿದ್ದರು. ಆಗ ಐಎಎಸ್ ಅಧಿಕಾರಿ ಹರ್ಷ ಗುಪ್ತ ಮತ್ತು ಡಿ.ರೂಪ ಕೊರೊನಾ ರೋಗಿಯಿಂದ ಪಡೆದಿರುವ ಬಿಲ್ ಪಡೆದು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಸರ್ಕಾರ ನಿಗದಿ ಪಡಿಸಿದ ಹಣಕ್ಕಿಂತ ದುಪ್ಪಟ್ಟು ಹಣ ವಸೂಲಿ ಮಾಡಿರುವ ಬಗ್ಗೆ ಬೆಳಕಿಗೆ ಬಂದಿದೆ.

ತಕ್ಷಣ ಐಎಎಸ್ ಅಧಿಕಾರಿ ಹರ್ಷ ಗುಪ್ತ ಮತ್ತು ಡಿ.ರೂಪ ನೇತೃತ್ವದ ತಂಡ ಆಸ್ಪತ್ರೆಯ ಮೇಲೆ ದಾಳಿ ಮಾಡಿದೆ. ಆಗ ರೋಗಿಯ ಬಳಿ ದುಪ್ಪಟ್ಟು ಹಣ ಪಡೆದಿರುವುದಾಗಿ ಆಸ್ಪತ್ರೆ ಒಪ್ಪಿಕೊಂಡಿದೆ. ಕೊನೆಗೆ ಅಧಿಕಾರಿಗಳು ದಾಳಿಯ ವೇಳೆ ಆಸ್ಪತ್ರೆ ಆಡಳಿತ ಮಂಡಳಿಗೆ ಖಡಕ್ ಎಚ್ಚರಿಕೆ ನೀಡಿದೆ.

ಅಷ್ಟೇ ಅಲ್ಲದೇ ರೋಗಿಯಿಂದ ಪಡೆದ ದುಪ್ಪಟ್ಟು ಹಣವನ್ನು ಹಿಂದಿರುಗಿಸುವಂತೆ ಹೇಳಿದ್ದಾರೆ. ಅದಕ್ಕೆ ಆಸ್ಪತ್ರೆ ಆಡಳಿತ ಮಂಡಳಿ ಕೂಡ ಒಪ್ಪಿಕೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *