ಕೋಲಾರದಲ್ಲಿ ಮಳೆ, ವಿದ್ಯುತ್ ತಂತಿ ತಗುಲಿ 14 ಕುರಿ ಸಾವು

Public TV
1 Min Read

– ವಿಷಪೂರಿತ ಮೇವು ತಿಂದು 2 ಹಸು ಸಾವು

ಕೋಲಾರ: ಕೋಲಾರ ಜಿಲ್ಲೆಯಲ್ಲಿಂದು ಸಂಜೆ ಮಳೆರಾಯನ ಆರ್ಭಟ ಜೋರಾಗಿತ್ತು. ಅರ್ಧ ಗಂಟೆಗಳ ಕಾಲ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 14 ಕುರಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಜಿಲ್ಲೆಯ ಕೆಜಿಎಫ್ ತಾಲೂಕು ಚೆನ್ನಪಲ್ಲಿ ಗ್ರಾಮದ ಸುರೇಶ್ ಎಂಬವರಿಗೆ ಸೇರಿದ ಕುರಿಗಳು ಮೃತಪಟ್ಟಿದ್ದು, ಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕುರಿಗಳು ಸಾವನ್ನಪ್ಪಿವೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಷಪೂರಿತ ನೀರಿನಿಂದ ಬೆಳೆದ ಮೇವು ತಿಂದು 2 ಹಸು ಸಾವು
ವಿಷಪೂರಿತ ಮೇವು ತಿಂದು ಹಸುಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲುಕಿನ ಸೀತನಾಯಕನಹಳ್ಳಿ ಸಮೀಪ ನಡೆದಿದೆ. ಕಾರ್ಖಾನೆಯ ವಿಷಪೂರಿತ ತ್ಯಾಜ್ಯ ಹೊರಕ್ಕೆ ಬಿಟ್ಟ ಪರಿಣಾಮ ವಿಷಪೂರಿತವಾಗಿ ಮೇವು ತಿಂದ ಎರಡು ಹಸುಗಳು ಮೃತಪಟ್ಟಿವೆ. ಇದೀಗ ಹಸುವಿನ ಮಾಲೀಕ ಕಾರ್ಖಾನೆಯ ಬಳಿ ಹಸುವಿನ ಶವ ಇಟ್ಟು ಪ್ರತಿಭಟನೆ ಮಾಡಿದ್ದಾರೆ.

ಕೋಲಾರ ಜಿಲ್ಲೆ ಮಾಲೂರಿನ ಕೈಗಾರಿಕಾ ಪ್ರದೇಶದ ಸೀತನಾಯಕನಹಳ್ಳಿ ಬಳಿ ಇರುವ ಕ್ಲೋರೈಡ್ ಮೆಟಲ್ ಲಿಮಿಟೆಡ್ ಎಂಬ ಕಂಪನಿಯ ಹೊಗೆ ವಿಷಪೂರಿತ ನೀರು ಬಿಡುಗಡೆ ಮಾಡಿದರ ಪರಿಣಾಮ ಈ ಘಟನೆ ನಡೆದಿದೆ. ನರಸಿಂಹ ರೆಡ್ಡಿ ಎಂಬವರಿಗೆ ಸೇರಿದ ಎರಡು ಹಸುಗಳು, ಅಂದಾಜು 1.5 ಲಕ್ಷ ಬೆಲೆಯುಳ್ಳದಾಗಿದೆ. ಹಾಗಾಗಿ ಪರಿಹಾರ ಭರಿಸಿಕೊಡುವಂತೆ ಕಾರ್ಖಾನೆ ಮುಂದೆ ಹಸುವಿನ ಮಾಲೀಕ ಪ್ರತಿಭಟನೆ ನಡೆಸು ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಜಯಪುರ ಜಿಲ್ಲೆಯಾದ್ಯಂತ ಮಳೆಯ ಆರ್ಭಟ – ಬಾಳೆ ನಾಶಗೊಳಿಸಿದ ರೈತ ಮಹಿಳೆ

Share This Article
Leave a Comment

Leave a Reply

Your email address will not be published. Required fields are marked *