ಕೋವಿಡ್‍ಗೆ ಕವಲೇದುರ್ಗದ ಸ್ವಾಮೀಜಿ ಲಿಂಗೈಕ್ಯ

Public TV
1 Min Read

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಮಠಗಳಲ್ಲಿ ಒಂದಾದ ಕವಲೇದುರ್ಗ ಮಠದ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಕವಲೇದುರ್ಗ ಮಠದ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿಗಳಿಗೆ ವಾರದ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಸೋಂಕು ಪತ್ತೆಯಾದ ನಂತರ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ಸಮಸ್ಯೆ ತೀವ್ರವಾಗಿ ಉಲ್ಬಣಿಸಿದ ಕಾರಣ ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಅಪಾರ ಸಂಖ್ಯೆಯ ಭಕ್ತಗಣ ಹೊಂದಿರುವ ಸ್ವಾಮೀಜಿಗಳ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಇದನ್ನು ಓದಿ:ಶತಾಯುಷಿ ಇಚ್ಚಂಗಿಯ ಶಿವಾನಂದ ಮಠದ ಶರಣಮ್ಮ ಲಿಂಗೈಕ್ಯ

ಇತ್ತೀಚೆಗಷ್ಟೇ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆ ಗವಿಮಠದ ತೋಂಟದಾರ್ಯ ಸ್ವಾಮೀಜಿ(80) ಅವರಿಗೆ ಹೃದಯಾಘಾತವಾಗಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಅಲ್ಲದೆ ಒಂದು ವಾರದ ಹಿಂದೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದ ಶ್ರೀ ಶಿವಾನಂದ ಮಠದ ಶರಣಮ್ಮನವರು(ಪಾರ್ವತೆಮ್ಮನವರು) ಲಿಂಗೈಕ್ಯರಾಗಿದ್ದರು. ಇದನ್ನು ಓದಿ: ಕಗ್ಗೆರೆ ಗವಿಮಠದ ತೋಂಟದಾರ್ಯ ಸ್ವಾಮೀಜಿ ಲಿಂಗೈಕ್ಯ

Share This Article
Leave a Comment

Leave a Reply

Your email address will not be published. Required fields are marked *