ಗೆಳತಿ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆಗೈದು ಆತ್ಮಹತ್ಯೆಗೆ ಯತ್ನ

Public TV
1 Min Read

– ಜೀವನ್ಮರಣ ಹೋರಾಟದಲ್ಲಿ ಯುವತಿ

ಹೈದರಾಬಾದ್: ಯುವಕನೋರ್ವ ಗೆಳತಿಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ನಡೆದಿದೆ.

ಶ್ರೀಕಾಂತ್ ಗೆಳತಿ ಪ್ರಿಯಾಂಕ ಮೇಲೆ ಚಾಕುವಿನಿಂದ ದಾಳಿ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಿಯಾಂಕ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಡುರಸ್ತೆಯಲ್ಲಿ ದಾಳಿ ನಡೆದಿದ್ದು, ಸ್ಥಳೀಯರು ಇಬ್ಬರನ್ನೂ ಕೆಜಿಹೆಚ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯ ಕತ್ತಿನ ಭಾಗದಲ್ಲಿ ದೊಡ್ಡ ಪ್ರಮಾಣದ ಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾಳೆ ಎಂದು ಕೆಜಿಹೆಚ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಶ್ರೀಕಾಂತ್ ಮತ್ತು ಪ್ರಿಯಾಂಕ ಪರಸ್ಪರ ಪ್ರೀತಿಸುತ್ತಿದ್ದರು ಎಂದು ವರದಿಯಾಗಿದ್ದು, ಶ್ರೀಕಾಂತ್ ನ ಈ ನಿರ್ಧಾರಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *