ಗ್ರಾಮಕ್ಕೆ ಹೊರಗಿನವರಿಗೆ ನೋ ಎಂಟ್ರಿ – ಸೆಲ್ಫ್ ಲಾಕ್ ಮಾಡಿಕೊಂಡ ಗ್ರಾಮಸ್ಥರು

Public TV
1 Min Read

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದಂತೆ ಸ್ವಯಂ ನಿರ್ಬಂಧ ಹೇರಿಕೊಳ್ಳಲು ಜಿಲ್ಲೆಯ ಕೊಳ್ಳೇಗಾಲ ತಾಲೂಕು ಸತ್ತೆಗಾಲ ಗ್ರಾಮಸ್ಥರು ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಕಟ್ಟಿ ಹಾಕಲು ಸಭೆ ನಡೆಸಿದ ಡಾ.ಬಿ.ಆರ್ ಅಂಬೇಡ್ಕರ್ ಬಡಾವಣೆಯ ನಿವಾಸಿಗಳು ತುರ್ತು ಸಂದರ್ಭ ಹೊರತಾಗಿ ಗ್ರಾಮದಿಂದ ಯಾರೂ ಹೊರ ಹೋಗುವಂತಿಲ್ಲ ಹಾಗೆಯೇ ಹೊರಗಿನಿಂದಲು ಗ್ರಾಮಕ್ಕೆ ಯಾರು ಬರುವಂತಿಲ್ಲ ಎಂದು ತೀರ್ಮಾನ ಕೈಗೊಂಡಿದ್ದಾರೆ.

ಉದ್ಯೋಗಕ್ಕಾಗಿ ಬೆಂಗಳೂರು ಸೇರಿದಂತೆ ಬೇರೆ ಕಡೆ ಇರುವರು ಸದ್ಯಕ್ಕೆ ಗ್ರಾಮಕ್ಕೆ ಬರಬಾರದು ಎಂದು ಸೂಚನೆ ನೀಡಿದ್ದು, ಸಾಲ ವಸೂಲಾತಿಗೆ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಕೊರೊನಾ ಕಡಿಮೆ ಆಗುವವರೆಗು ಬರಬಾರದು. ಬಡಾವಣೆಯ ಪ್ರತಿಯೊಬ್ಬರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು, ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡರೆ ತಕ್ಷಣ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಎಲ್ಲಿಯು ಗುಂಪು ಸೇರದೆ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡು ತಮ್ಮ ತಮ್ಮ ಕೆಲಸ ಮಾಡಿಕೊಳ್ಳಬೇಕು ಎಂದು ನ್ಯಾಯಪಂಚಾಯ್ತಿ ಸಭೆ ನಡೆಸಿ ಕಟ್ಟುನಿಟ್ಟಿನ ತೀರ್ಮಾನ ಕೈಗೊಂಡಿದ್ದು ಈ ಬಗ್ಗೆ ಗ್ರಾಮದಲ್ಲಿ ಡಂಗುರ ಸಾರಿ, ಧ್ವನಿವರ್ಧಕ ಮೂಲಕವೂ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *