ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಉಚಿತ ಟ್ಯಾಬ್ ವಿತರಣೆ

Public TV
1 Min Read

ವಿಜಯನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರದಿಂದ ಇಂದು ವಿಜಯನಗರದಲ್ಲಿ ಉಚಿತ ಟ್ಯಾಬ್ ವಿತರಣೆ ಮಾಡಲಾಯಿತು. ಇದನ್ನೂ ಓದಿ:  ಕೊರೊನಾದಿಂದ ಪತ್ನಿ ಸಾವು- ಮನನೊಂದ ಪತಿ ಮಕ್ಕಳ ಜೊತೆಗೆ ಆತ್ಮಹತ್ಯೆ

ಹೊಸಪೇಟೆ ತಾಲೂಕಿನ ಒಟ್ಟು ಮೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಟ್ಯಾಬ್‍ಗಳನ್ನು ವಿತರಣೆ ಮಾಡಲಾಯಿತು. ಹೊಸಪೇಟೆ ತಾಲೂಕಿನ, ಬುಕ್ಕಸಾಗರದ ಸರ್ಕಾರಿ ಪ್ರೌಢ ಶಾಲೆಯ 106 ಮಕ್ಕಳಿಗೆ 53 ಟ್ಯಾಬ್‍ಗಳನ್ನು ಹಾಗೂ ಶ್ರೀ ರಾಮರಂಗಾಪುರ ಸರ್ಕಾರಿ ಪ್ರೌಢ ಶಾಲೆಯ 29 ಮಕ್ಕಳಿಗೆ 14 ಟ್ಯಾಬ್‍ಗಳನ್ನು ಹಾಗೂ ದೇವಲಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 100 ಮಕ್ಕಳಿಗೆ ಒಟ್ಟು 50 ಟ್ಯಾಬ್‍ಗಳನ್ನು ಉಚಿತವಾಗಿ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಇಂದು ಒಟ್ಟು 117 ಟ್ಯಾಬ್‍ಗಳನ್ನು ಮೂರು ಶಾಲೆಯ ಮಕ್ಕಳಿಗೆ ನೀಡಲಾಯಿತು. ಕೊರೊನಾ ಸಮಯದಲ್ಲಿ ಶಾಲೆಗಳು ಇಲ್ಲದೆ ಕಲಿಕೆಯಲ್ಲಿ ನಾವು ಹಿಂದೆ ಬಿದಿದ್ದು, ಉಳಿದ ದಿನಗಳನ್ನು ಈ ಟ್ಯಾಬ್ ನೋಡಿಕೊಂಡು ಉತ್ತಮ ಫಲಿತಾಂಶ ತರುತ್ತೆವೆ. ಪಬ್ಲಿಕ್ ಟಿವಿ ನೀಡಿದ ಟ್ಯಾಬ್ ಗಳು ನಮ್ಮಗೆ ಬಹಳ ಸಹಕಾರಿಯಾಗಿದೆ. ನಮ್ಮಗೆ ಟ್ಯಾಬ್ ನೀಡಿದ ಪಬ್ಲಿಕ್ ಟಿವಿಗೆ ಹಾಗೂ ಟ್ಯಾಬ್ ದಾನಿಗಳಾದ ಆನಂದ್ ಸಿಂಗ್ ಅವರಿಗೆ ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *