ಚರ್ಚಾಸ್ಪದ ಧ್ವನಿಸುರುಳಿ ಒಂದು ಕುಚೋದ್ಯ: ಶ್ರೀನಿವಾಸ್ ಪೂಜಾರಿ

Public TV
1 Min Read

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಚರ್ಚಾಸ್ಪದ ಧ್ವನಿ ಸುರುಳಿ ಒಂದು ಕುಚೋದ್ಯ, ಸುಳ್ಳು ಆಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಕುಂದಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ ಅವರು, ನಳಿನ್ ಕುಮಾರ್ ಕಟೀಲ್ ಸಂಘಟನೆಯಿಂದ ಬಂದವರು. ಸಂಘಟನೆಯ ಸೂತ್ರವನ್ನು ತಿಳಿದಿರುವವರು. ರಾಜ್ಯಾಧ್ಯಕ್ಷ ಕಟೀಲ್ ಬಹಳ ಸೂಕ್ಷ್ಮಮತಿಗಳು. ನನಗೆ ಧ್ವನಿಸುರುಳಿ ಬಗ್ಗೆಯೇ ಸಂಶಯವಿದೆ. ಮೊದಲು ಆಡಿಯೋ ಬಗ್ಗೆ ತನಿಖೆಯಾಗಬೇಕು ಎಂದರು.

ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿಗಳಲ್ಲಿ ನಾನು ಆಗ್ರಹಿಸುತ್ತಿದ್ದೇನೆ. ನಳಿನ್ ಕುಮಾರ್ ಕಟೀಲ್ ಅವರ ಸ್ವರಭಾರ ಇದಲ್ಲ. ಹಾಗಾಗಿ ನಾನು ಧ್ವನಿಸುರುಳಿಯ ಬಗ್ಗೆ ನನಗೆ ಸಂಶಯವಿದೆ. ಮೊದಲು ತನಿಖೆಯಾಗಲಿ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *