ಚಿತ್ರದುರ್ಗದ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಕೊರೊನಾಗೆ ಬಲಿ

Public TV
1 Min Read

– ಪಬ್ಲಿಕ್ ಟಿವಿ ಆಡಳಿತ ಮಂಡಳಿಯಿಂದ ಕುಟುಂಬಕ್ಕೆ ಪರಿಹಾರ

ಚಿತ್ರದುರ್ಗ: ಕೊರೊನಾ ಮಹಾಮಾರಿಗೆ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಬಸವರಾಜ ಕೋಟಿ(43) ತುತ್ತಾಗಿದ್ದಾರೆ.

ಕಳೆದ 5 ವರ್ಷಗಳಿಂದ ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕೋಟಿ, ಕೋವಿಡ್ ಎರಡನೇ ಅಲೆಗೆ ಬಲಿಯಾಗಿದ್ದಾರೆ.

ಕಳೆದ ಹದಿನೈದು ದಿನಗಳಿಂದ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತ ಬಸವರಾಜ ಕೋಟಿ ಅವರಿಗೆ ಹತ್ತು ವರ್ಷದ ಓರ್ವ ಪುತ್ರ ಮತ್ತು ಹನ್ನೆರಡು ವರ್ಷದ ಖುಷಿ ಎಂಬ ಇಬ್ಬರು ಪುಟಾಣಿ ಮಕ್ಕಳು, ಪತ್ನಿಯಾದ ಶಾಂತ ಸೇರಿದಂತೆ ಹೆತ್ತವರು ಹಾಗೂ ಅಪಾರ ಬಂಧಗಳನ್ನು ಅಗಲಿದ್ದಾರೆ.

ಬಸವರಾಜ್ ಅಗಲಿಕೆಗೆ ಪಬ್ಲಿಕ್ ಟಿವಿ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ ಮೃತ ಬಸವರಾಜ್ ಕುಟುಂಬಕ್ಕೆ ಪಬ್ಲಿಕ್ ಟಿವಿ ಆಡಳಿತ ಮಂಡಳಿ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

Share This Article
Leave a Comment

Leave a Reply

Your email address will not be published. Required fields are marked *