ಜಗ್ಗೇಶ್ ಪುತ್ರ ಯತಿರಾಜ್ ಕಾರ್ ಅಪಘಾತ -ಮರಕ್ಕೆ ಡಿಕ್ಕಿ ಹೊಡೆದ ಕಾರ್

Public TV
0 Min Read

ಚಿಕ್ಕಬಳ್ಳಾಪುರ: ಹಿರಿಯ ನಟ ಜಗ್ಗೇಶ್ ಹಿರಿಯ ಪುತ್ರ ಯತಿರಾಜ್ ಕಾರ್ ಅಪಘಾತಕ್ಕೊಳಗಾಗಿದೆ.

ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಲಗುರ್ಕಿ ಬೈ ಪಾಸ್ ಬಳಿ ಅಪಘಾತ ಸಂಭವಿಸಿದ್ದು, ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಗುರುರಾಜ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಯತಿರಾಜ್ ಅವರನ್ನ ರಕ್ಷಣೆ ಮಾಡಿದ್ದಾರೆ.

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುವ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ. ಜಗ್ಗೇಶ್ ಕುಟುಂಬಸ್ಥರು ಅಪಘಾತ ಆಗಿರೋದನ್ನು ಖಚಿತಪಡಿಸಿದ್ದಾರೆ. ಯತಿರಾಜ್ ಸೇಫ್ ಆಗಿದ್ದು, ಯಾವುದೇ ಪ್ರಾಣಪಾಯ ಆಗಿಲ್ಲ ಎಂದು ಜಗ್ಗೇಶ್ ಕುಟುಂಬ ಮಾಹಿತಿ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *